- Advertisement -
- Advertisement -






ಪುತ್ತೂರು: ಪುತ್ತೂರಿನ ಕೊಂಬೆಟ್ಟು ಮಮ್ಮಿ ಜ್ಯೂಸ್ನ ಮಾಲಕ ಜ್ಞಾನಾನಂದ ಹೆಗ್ಡೆ (58) ಬೆಂಗಳೂರಿನಲ್ಲಿ ನಿಧನರಾದರು.
ಉರ್ಲಾಂಡಿ ದಿ. ಶ್ರೀನಿವಾಸ ಹೆಗ್ಡೆ ಅವರ ಪುತ್ರ ಜ್ಞಾನಾನಂದ ಹೆಗ್ಡೆಯವರು ಪುತ್ತೂರು ಮುಖ್ಯರಸ್ತೆಗೆ ಹತ್ತಿರದ ಕೊಂಬೆಟ್ಟಿನಲ್ಲಿ ಕಬ್ಬಿನ ಹಾಲಿನ ‘ಮಮ್ಮಿ ಜ್ಯೂಸ್’ ಶಾಪ್ ಮೂಲಕ ಎಲ್ಲರಿಗೂ ಚಿರಪರಿಚಿತರಾಗಿದ್ದರು. ಬಳಿಕ ಅನಾರೋಗ್ಯದಿಂದಾಗಿ ವ್ಯವಹಾರದಿಂದ ನಿವೃತ್ತಿ ಪಡೆದಿದ್ದ ಅವರು ಕಾರ್ಯಕ್ರಮಕ್ಕೆ ಸಂಬಂಧಿಸಿ ಬೆಂಗಳೂರಿಗೆ ಹೋಗಿದ್ದ ಸಂದರ್ಭ ಅಲ್ಲಿ ಹೃದಯಾಘಾತಕ್ಕೀಡಾಗಿ ನಿಧನರಾದರು.
ಮೃತರು ತಾಯಿ, ಪತ್ನಿ, ಪುತ್ರಿಯರು, ಸಹೋದರರು ಹಾಗೂ ಸಹೋದರಿಯರನ್ನು ಅಗಲಿದ್ದಾರೆ.
- Advertisement -