Saturday, June 28, 2025
spot_imgspot_img
spot_imgspot_img

ಪುತ್ತೂರು: ತಾಲೂಕು ಕಚೇರಿಗೆ ಶಾಸಕ ಅಶೋಕ್ ರೈ ರೈಡ್‌‌- ಹಾಜರಾತಿ ಪರಿಶೀಲನೆ..!

- Advertisement -
- Advertisement -

ಪುತ್ತೂರು: ತಾಲೂಕು ಕಚೇರಿಯ ಸಿಬ್ಬಂದಿಗಳು ಸರಿಯಾದ ಸಮಯಕ್ಕೆ ಕಚೇರಿಗೆ ಬರುತ್ತಿಲ್ಲ, ಕೆಲವೊಂದು ಕಚೇರಿಗೆ ಹಗಲು ವೇಳೆ ಬಾಗಿಲು ಹಾಕಿರುತ್ತಾರೆ ಎಂದು ದೂರು ಬಂದ ಹಿನ್ನೆಲೆಯಲ್ಲಿ ಶನಿವಾರ ಶಾಸಕ ಅಶೋಕ್ ರೈ ಅವರು ತಾಲೂಕು ಕಚೇರಿಗೆ ದಾಳಿ ನಡೆಸಿ ಹಾಜರಾತಿ ಪರಿಶೀಲನೆ ನಡೆಸಿದ್ದಾರೆ.

ಮಿನಿ ವಿಧಾನ ಸೌಧದಲ್ಲಿರುವ ಪ್ರತೀ ಕಚೇರಿಗೂ ಶಾಸಕರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ಎಡಿಎಲ್‌ಆರ್ ಕಚೇರಿಯಲ್ಲಿ ಯಾರೂ ಇರಲಿಲ್ಲ. ಅಧಿಕಾರಿಯ ಬಗ್ಗೆ ಪರಿಶೀಲನೆ ನಡೆಸಿದ ಶಾಸಕರು ಅಧಿಕಾರಿ ಇಲ್ಲದಿದ್ದರೆ ಕಚೇರಿಯನ್ನು ಯಾಕೆ ಓಪನ್ ಇಟ್ಟಿದ್ದೀರಿ ಬಂದ್ ಮಾಡಿ ಎಂದು ಶಾಸಕರೇ ಕಚೇರಿಯ ಬಾಗಿಲನ್ನು ಮುಚ್ಚಿದರು. ಈ ವೇಳೆ ಓಡೋಡಿ ಬಂದ ಎಡಿಎಲ್‌ ಆರ್ ರವರು ನನಗೆ ಕಡಬ ಹೋಗಲಿದ್ದ ಕಾರಣ ಕಚೇರಿಯಲ್ಲಿ ನಾನಿರಲಿಲ್ಲ ಎಂದು ಶಾಸಕರಲ್ಲಿ ತಿಳಿಸಿದರು. ಉಳಿದಂತೆ ಎಲ್ಲಾ ಕಚೇರಿಗಳಲ್ಲೂ ಸಿಬ್ಬಂದಿಗಳು, ಅಧಿಕಾರಿಗಳು ಹಾಜರಿದ್ದರು.

ಎಲ್ಲಾ ಅಧಿಕಾರಿಗಳು, ಸಿಬ್ಬಂದಿಗಳು ಬೆಳಿಗೆ 10 ಗಂಟೆಗೆ ಕಚೇರಿಯಲ್ಲಿ ಹಾಜರಿರಬೇಕು. ಕಚೇರಿಗೆ ತಡವಾಗಿ ಬರುವುದನ್ನು ನಾನು ಸಹಿಸುವುದಿಲ್ಲ. ಜನರ ಕೆಲಸ ಮಾಡಬೇಕು. ಜನ ಕಚೇರಿಗೆ ಬರುವಾಗ ಅಧಿಕಾರಿ, ಸಿಬ್ಬಂದಿಗಳು ಇರಬೇಕು, ದೂರುಗಳು ಬಾರದ ಹಾಗೇ ಅವರೇ ನೋಡಿಕೊಳ್ಳಬೇಕು. ಇವತ್ತು ಕಚೇರಿಯಲ್ಲಿ ಇಲ್ಲದ ಇಬ್ಬರಿಗೆ ಶೋಕಾಸ್ ನೋಟೀಸ್ ಜಾರಿ ಮಾಡುವಂತೆ ಸೂಚನೆ ನೀಡಿದ್ದೇನೆ. ಸಹಾಯಕ ಕಮಿಷನರ್ ಗೂ ಈ ವಿಚಾರದಲ್ಲಿ ಸೂಚನೆ ನೀಡಿದ್ದೇನೆ, ತಹಶಿಲ್ದಾರ್‌ಗೂ ಸೂಚನೆ ನೀಡಿದ್ದೇನೆ ಎಂದು ಪುತ್ತೂರು ಶಾಸಕ ಅಶೋಕ್ ರೈ ತಿಳಿಸಿದ್ದಾರೆ.

- Advertisement -

Related news

error: Content is protected !!