Saturday, June 28, 2025
spot_imgspot_img
spot_imgspot_img

ಪುತ್ತೂರು: ಕ್ಷುಲ್ಲಕ ಕಾರಣಕ್ಕೆ ತಾಯಿಗೆ ಹಲ್ಲೆಗೈದು ಕೊಲೆ ಪ್ರಕರಣ; ಆರೋಪಿ ಮಗನಿಗೆ 5 ವರ್ಷ ಶಿಕ್ಷೆ, ದಂಡ..!

- Advertisement -
- Advertisement -

ಪುತ್ತೂರು: ಕ್ಷುಲ್ಲಕ ಕಾರಣಕ್ಕೆ ತನ್ನ ತಾಯಿಗೆ ಹಲ್ಲೆ ನಡೆಸಿ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಐದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆರೋಪಿಗೆ ಐದು ವರ್ಷ ಶಿಕ್ಷೆ, ದಂಡ ವಿಧಿಸಿ ತೀರ್ಪು ನೀಡಿದೆ.

ಶಿಕ್ಷೆಗೊಳಗಾದ ಆರೋಪಿಯನ್ನು ಗೋಪಾಲ@ ಗೋಪಾ ಎಂದು ಗುರುತಿಸಲಾಗಿದೆ.

2019 ರಂದು ಪೊಲೀಸ್ ಠಾಣಾ ವ್ಯಾಪ್ತಿಯ ಪುತ್ತೂರು ಕಾಯಿಮಣ ಗ್ರಾಮದ ಅಂಕಜಾಲು ಎಂಬಲ್ಲಿ, ಆರೋಪಿ ಗೋಪಾಲ@ ಗೋಪಾ ಎಂಬಾತನು ಕ್ಷುಲ್ಲಕ ಕಾರಣಕ್ಕೆ ತನ್ನ ತಾಯಿ ಚಿಂಕು ಎಂಬವರಿಗೆ ಹಲ್ಲೆ ನಡೆಸಿ, ಬಳಿಕ ಚಿಕಿತ್ಸೆ ಕೊಡಿಸದ ಪರಿಣಾಮ ಆಕೆಯು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ, ಆರೋಪಿತನ ವಿರುದ್ಧ ಬೆಳ್ಳಾರೆ ಠಾಣೆಯಲ್ಲಿ ಕಲಂ 304 ಐಪಿಸಿ ರಂತೆ ಪ್ರಕರಣ ದಾಖಲಾಗಿರುತ್ತದೆ.

ಪ್ರಕರಣದ ಪ್ರಾರಂಭಿಕ ತನಿಖೆ ನಡೆಸಿದ ಬೆಳ್ಳಾರೆ ಠಾಣಾ ಪೊಲೀಸ್ ಉಪನಿರೀಕ್ಷಕರಾಗಿದ್ದ ಈರಯ್ಯ ಡಿಎನ್ ರವರು, ತನಿಖೆ ಮುಂದುವರಿಸಿದ ಆಗಿನ ಸುಳ್ಯ ವೃತ್ತದ ವೃತ್ತ ನಿರೀಕ್ಷಕರಾಗಿದ್ದ ಸತೀಶ್ ಕುಮಾರ್ ಆರ್ ರವರು ತನಿಖೆ ನಡೆಸಿ ಆರೋಪಿಯ ವಿರುದ್ಧ ಸೂಕ್ತ ಸಾಕ್ಷಿಗಳನ್ನು ಕಲೆಹಾಕಿ, ಮಾನ್ಯ ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರ ಸಲ್ಲಿಸಿರುತ್ತಾರೆ. ಪ್ರಕರಣದಲ್ಲಿ ಅಭಿಯೋಜನೆಯ ಪರವಾಗಿ ಶ್ರೀಮತಿ ಜಯಂತಿ ಭಟ್ ರವರು ವಿಚಾರಣೆ ನಡೆಸಿ ವಾದ ಮಂಡಿಸಿರುತ್ತಾರೆ. ಪ್ರಸ್ತುತ ಆರೋಪಿ ಕೃತ್ಯ ಎಸಗಿರುವುದು ಸಾಬೀತಾಗಿ, ಮಾನ್ಯ ಐದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮಂಗಳೂರು ಇದರ ನ್ಯಾಯಾಧೀಶರಾದ ಶ್ರೀಮತಿ ಸರಿತಾ ಡಿ ರವರು ಆರೋಪಿಗೆ ಐದು ವರ್ಷ ಶಿಕ್ಷೆ ಮತ್ತು 5000 ದಂಡ ದಂಡ ತಪ್ಪಿದಲ್ಲಿ ಮೂರು ತಿಂಗಳ ಸಾಧಾರಣ ಶಿಕ್ಷೆ ವಿಧಿಸಿ ದಿನಾಂಕ 29.04.2025 ರಂದು ತೀರ್ಪು ನೀಡಿರುತ್ತಾರೆ.

- Advertisement -

Related news

error: Content is protected !!