ಪುತ್ತೂರು: ಕೆಲ ದಿನಗಳ ಹಿಂದೆ ವೀಡಿಯೋ ಮಾಡಿ ವಿಷ ಸೇವಿಸುವುದಾಗಿ ತಿಳಿಸಿ ಬಳಿಕ ವಿಷ ಸೇವಿಸಿದ್ದ ಮಾಡಾವು ಕಟ್ಟತ್ತಾರು ನಿವಾಸಿ ನಾಸಿರ್ ಭಾನುವಾರ ಮಧ್ಯಾಹ್ನ ಮಂಗಳೂರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಮಂಗಳವಾರ ವಿಷ ಸೇವಿಸಿದ್ದು, ಆಸ್ಪತ್ರೆಗೆ ದಾಖಲಿಸಲಾಗಿತ್ತು. ಜೀವನ್ಮರಣ ಸ್ಥಿತಿಯಲ್ಲಿದ್ದ ಅವರು ಇದೀಗ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಲೈವ್ ವೀಡಿಯೋ ಮಾಡಿ ಕೃತ್ಯಕ್ಕೆ ಕಾರಣ ಹೇಳಿರುವ ನಾಸಿರ್ ಅದ್ರಾಮ ಎಂಬವರ ಮನೆಯಲ್ಲಿ ಕಾರು ಚಾಲಕನಾಗಿ ಕೆಲಸ ಮಾಡುತ್ತಿದ್ದೆ, ಅಲ್ಲಿನ ಕುಟುಂಬದ ಹುಡುಗಿಯೊಂದಿಗೆ ಸಂಬಂಧ ಇದೆಯೆಂದು ಹೇಳಿ ಅದ್ರಾಮ ಅವರು ಮನೆಗೆ ಕರೆದು ನಾಲ್ವರ ಜೊತೆ ಸೇರಿ ನನ್ನ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಅವರು ಆರೋಪಿಸಿದ್ದರು ನನಗೆ ಅಲ್ಲಿನ ಯಾವುದೇ ಹುಡುಗಿ ಜೊತೆಗೂ ಸಂಬಂಧ ಇಲ್ಲ ಎಂದು ಖುದ್ದಾಗಿ ಲೈವ್ ವೀಡಿಯೋ ಮಾಡಿ ತಿಳಿಸಿದ್ದರು. ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.
ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ಆತನನ್ನು ಸ್ಥಳೀಯರು ತಕ್ಷಣ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿದ್ದರು ಚಿಂತಾಜನಕ ಸ್ಥಿತಿಯಲ್ಲಿದ್ದ ನಾಸಿರ್ ಇದೀಗ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಮೃತರ ದಫನ ಕಾರ್ಯ ಅಜ್ಞೆಕಟ್ಟೆ ಮಸೀದಿಯ ದಫನಭೂಮಿಯಲ್ಲಿ ನಡೆಯಲಿದೆ ಎಂದು ತಿಳಿದು ಬಂದಿದೆ.