- Advertisement -
- Advertisement -
ಪುತ್ತೂರು: ನಿಡ್ಪಳ್ಳಿ 1ನೇ ವಾರ್ಡಿನ ಉಪಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿ ಭಾರಿಸಿದೆ. ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಎನ್. ಸತೀಶ್ ಶೆಟ್ಟಿ ಜಯಗಳಿಸಿದ್ದಾರೆ.
ವಾರ್ಡ್-1ರ ಸಾಮಾನ್ಯ ಮೀಸಲು ಕ್ಷೇತ್ರದ ಬಿಜೆಪಿ ಬೆಂಬಲಿತ ಸದಸ್ಯ ಮುರಳೀಕೃಷ್ಣ ಭಟ್ ರವರ ನಿಧನದಿಂದ ತೆರವಾದ ಸ್ಥಾನಕ್ಕೆ ಜು.23ರಂದು ಚುನಾವಣೆ ನಡೆದಿತ್ತು. ನಿಡ್ಪಳ್ಳಿಯ ವಾರ್ಡ್ 1ರಲ್ಲಿ ಒಟ್ಟು 607 ಮತದಾರರಿದ್ದು, ಒಟ್ಟು 529 ಮತ ಚಲಾವಣೆಯಾಗಿದೆ. ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯಾಗಿ ಎನ್. ಸತೀಶ್ ಶೆಟ್ಟಿ, ಬಾಕಿತ್ತಿಮಾರ್ ಜಯ ಗಳಿಸಿದ್ದರೆ, ಪುತ್ತಿಲ ಪರಿವಾರ ಬೆಂಬಲಿತ ಅಭ್ಯರ್ಥಿಯಾಗಿ ಜಗನ್ನಾಥ ರೈ ಕೊಳಂಬೆತ್ತಿಮಾರ್ ಎರಡನೇ ಸ್ಥಾನ, ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿ ಎಂ. ಚಂದ್ರಶೇಖರ್ ಪ್ರಭು ಗೋಳಿತ್ತಡಿ ಮೂರನೇ ಸ್ಥಾನ ಪಡೆದುಕೊಂಡಿದ್ದಾರೆ.
ನಿಡ್ಪಳ್ಳಿ ಗ್ರಾಪಂನ ಚುನಾವಣಾಧಿಕಾರಿಯಾಗಿದ್ದ ತಾ.ಪಂ. ಯೋಜನಾಧಿಕಾರಿ ಸುಕನ್ಯಾ, ಸಹಾಯಕ ಚುನಾವಣಾಧಿಕಾರಿಯಾಗಿದ್ದ ಪಿಡಿಓ ಸಂಧ್ಯಾಲಕ್ಷ್ಮೀ ನೇತೃತ್ವದಲ್ಲಿ ಮತ ಎಣಿಕೆ ಕಾರ್ಯ ನಡೆಯಿತು.
- Advertisement -