Monday, July 14, 2025
spot_imgspot_img
spot_imgspot_img

ಪುತ್ತೂರು: (ನ.2) ರೈ ಎಸ್ಟೇಟ್ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ ವತಿಯಿಂದ ಶಾಸಕ ಅಶೋಕ್ ಕುಮಾರ್ ರೈ ನೇತೃತ್ವದ ‘ಅಶೋಕ ಜನ-ಮನ 2024’ ವಸ್ತ್ರ ವಿತರಣಾ ಕಾರ್ಯಕ್ರಮ

- Advertisement -
- Advertisement -

ಶಾಸಕ ಅಶೋಕ್ ಕುಮಾರ್ ರೈ ನೇತೃತ್ವದ ರೈ ಎಸ್ಟೇಟ್ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ ಜನಸೇವಾ ಕೇಂದ್ರ ಪುತ್ತೂರು ಆಶ್ರಯದಲ್ಲಿ ‘ಅಶೋಕ ಜನ-ಮನ 2024’ ವಸ್ತ್ರ ವಿತರಣಾ ಕಾರ್ಯಕ್ರಮ ನವೆಂಬರ್ 2 ನೇ ಶನಿವಾರ ಪುತ್ತೂರಿನ ಕೊಂಬೆಟ್ಟು ಜ್ಯೂನಿಯರ್ ಕಾಲೇಜು ಕ್ರೀಡಾಂಗಣದಲ್ಲಿ ನಡೆಯಲಿದೆ.

ದೀಪಾವಳಿಯ ಪ್ರಯುಕ್ತ ಪ್ರತಿ ವರ್ಷದಂತೆ ನಡೆಯುವ ವಸ್ತ್ರ ವಿತರಣೆ ಹಾಗೂ ಗೂಡುದೀಪ ಸ್ಪರ್ಧೆಯನ್ನೊಳಗೊಂಡ ಕಾರ್ಯಕ್ರಮವು ಈ ಬಾರಿ ಅಶೋಕ ಜನ-ಮನ 2024 ಎಂಬ ಹೊಸ ಹೆಸರಿನೊಂದಿಗೆ ವಿನೂತನವಾಗಿ ವಿಜೃಂಭಣೆಯಿಂದ ನಡೆಯಲಿದ್ದು, ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.

ಅ. 27 ರಂದು ಬೆಂಗಳೂರಿನಲ್ಲಿ ಸಿ.ಎಂ ಹಾಗೂ ಡಿ.ಸಿ.ಎಂ ಅವರನ್ನು ಭೇಟಿಯಾಗಿ ಆಹ್ವಾನ ನೀಡಿದ ಸಂದರ್ಭದಲ್ಲಿ ಶಾಸಕರಿಗೆ ಭರವಸೆ ನೀಡಿದ್ದು ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಕಾರ್ಯಕ್ರಮದಲ್ಲಿ ಭಾಗವಹಿಸುವುದು ನಿಶ್ಚಿತ ಎಂದು ಶಾಸಕ ಅಶೋಕ್ ರೈ ಅವರು ಖಚಿತಪಡಿಸಿದ್ದಾರೆ.

ರೈ ಎಸ್ಟೇಟ್‌ನ ಸ್ವಂತ ಖರ್ಚಿನಿಂದ 3.5 ಕೋಟಿ ವೆಚ್ಚದಲ್ಲಿ ವಸ್ತ್ರ ವಿತರಣೆ ನಡೆಯಲಿರುವುದು. ಎಲ್ಲರಿಗೂ ಭೋಜನದ ವ್ಯವಸ್ಥೆಯನ್ನು ಮಾಡಲಾಗುತ್ತದೆ.

- Advertisement -

Related news

error: Content is protected !!