Sunday, May 5, 2024
spot_imgspot_img
spot_imgspot_img

ಪುತ್ತೂರು: ಅಡಿಕೆ ಕಳವು ಪ್ರಕರಣ; ಇಬ್ಬರು ಆರೋಪಿಗಳ ಬಂಧನ- ಲಕ್ಷಾಂತರ ರೂ. ಮೌಲ್ಯದ ಸೊತ್ತು ವಶ

- Advertisement -G L Acharya panikkar
- Advertisement -

ಪುತ್ತೂರು: ಅಡಿಕೆ ಕಳವು ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳನ್ನು ಪುತ್ತೂರು ಗ್ರಾಮಾಂತರ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

ಕಾವು ಅಮ್ಚಿನಡ್ಕ ನಿವಾಸಿ ಕಿರಣ್ ಕುಮಾರ್, ಕಾವು ಅಮ್ಚಿನಡ್ಕ ನಿವಾಸಿ ಸಂತೋಷ್‌ ಬಂಧಿತ ಆರೋಪಿಗಳು.

ಪುತ್ತೂರಿನ ಮಾಡ್ನೂರು ಗ್ರಾಮದ ಅಮ್ಚಿನಡ್ಕ ಎಂಬಲ್ಲಿರುವ ವಿಷ್ಣು ಕಲ್ಲುರಾಯರವರ ಮನೆಯ ಉಗ್ರಾಣದಲ್ಲಿ ಶೇಖರಿಸಿಟ್ಟಿದ್ದ 10 ಪ್ಲಾಸ್ಟಿಕ್‌ ಗೋಣಿ ಚೀಲದಲ್ಲಿ ತುಂಬಿಸಿದ್ದ ಸುಮಾರು 2 ಕ್ವಿಂಟಾಲ್ ಸುಲಿಯದ ಒಣ ಅಡಿಕೆಯನ್ನು ಮತ್ತು ಹುಲ್ಲು ತೆಗಿಯುವ ಮೇಷಿನ್ ಕಳವಾಗಿತ್ತು. ಈ ಬಗ್ಗೆ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಬಂಧಿತ ಆರೋಪಿಗಳಿಂದ ಸುಮಾರು ರೂ 51,000/- ಮೌಲ್ಯದ 1.20 ಕ್ವಿಂಟಾಲ್‌ ಸುಲಿದ ಅಡಿಕೆ ಮತ್ತು ಸುಮಾರು ರೂ 5,000/-ಮೌಲ್ಯದ ಹುಲ್ಲು ತೆಗಿಯುವ ಮೇಷಿನ್‌ ಹಾಗೂ ಕಳವು ಮಾಡಲು ಉಪಯೋಗಿಸಿದ ಸುಮಾರು ಒಂದು ಲಕ್ಷ ಮೌಲ್ಯದ ಓಮ್ನಿ ಕಾರನ್ನು ವಶಪಡಿಸಿಕೊಂಡಿದ್ದಾರೆ. ಈ ಪ್ರಕರಣದ ಪ್ರಮುಖ ಆರೋಪಿ ಸಿನಾನ್ ತಲೆಮರೆಸಿಕೊಂಡಿದ್ದಾನೆ ಎನ್ನಲಾಗಿದೆ.

ಪುತ್ತೂರು ಉಪಾಧೀಕ್ಷಕರಾದ ಡಾ. ಗಾನ ಪಿ, ಕುಮಾರ್ ರವರ ಮಾರ್ಗದರ್ಶನದಂತೆ ಪುತ್ತೂರು ಗ್ರಾಮಾಂತರ ಠಾಣಾ ಪ್ರಭಾರ ಪೊಲೀಸ್ ನಿರೀಕ್ಷಕ ರವಿ.ಬಿ.ಎಸ್, ಪುತ್ತೂರು ಗ್ರಾಮಾಂತರ ಠಾಣಾ ಪೊಲೀಸ್ ಉಪ ನಿರೀಕ್ಷಕಧನಂಜಯ ಬಿ.ಸಿ, ಎಎಸ್ಐ ಮುರುಗೇಶ್, ಸಿಬ್ಬಂದಿಗಳಾದ ಬಾಲಕೃಷ್ಣ, ಅದ್ರಾಮ, ಪ್ರವೀಣ್ ರೈ, ಲೋಕೇಶ್, ಜಗದೀಶ್, ಮುನಿಯ ನಾಯ್ಕ , ಚಾಲಕರಾದ ಯೋಗೀಶ್ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

- Advertisement -

Related news

error: Content is protected !!