- Advertisement -
- Advertisement -
ಪುತ್ತೂರು: ಪುತ್ತೂರು ಸಂಚಾರ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್ ಸ್ಟೇಬಲ್ ಆಗಿ ಪದೋನ್ನತಿ ಹೊಂದಿ ಬಂಟ್ವಾಳ ಪೊಲೀಸ್ ಠಾಣೆಗೆ ವರ್ಗಾವಣೆಗೊಂಡಿರುವ ರಕ್ಷಿತ್ ಅವರನ್ನು ಪುತ್ತೂರು ಸಂಚಾರ ಪೊಲೀಸ್ ಠಾಣೆಯಲ್ಲಿ ಜ.1ರಂದು ಬೀಳ್ಕೊಡಲಾಯಿತು. ವಿಟ್ಲ ಠಾಣೆಯಲ್ಲೂ ಕರ್ತವ್ಯ ನಿರ್ವಹಿಸಿದ್ದರು.
ಪುತ್ತೂರು ಸಂಚಾರ ಪೊಲೀಸ್ ಠಾಣೆಯ ಎಸ್.ಐ ರಾಮ ನಾಯ್ಕ್ ಮತ್ತು ಸಿಬ್ಬಂದಿಗಳು ರಕ್ಷಿತ್ ಅವರಿಗೆ ಶಾಲು ಹೊದೆಸಿ ಸನ್ಮಾನಿಸಿದರು. ಈ ಸಂದರ್ಭದಲ್ಲಿ ಎ ಎಸ್ ಐ ಕುಶಾಲಪ್ಪ, ಎ.ಎಸ್.ಐ ಸುರೇಶ್ ಶರ್ಮ, ಹೆಡ್ ಕಾನ್ ಸ್ಟೇಬಲ್ ಸ್ಕರಿಯ ಅನಿಸಿಕೆ ವ್ಯಕ್ತ ಪಡಿಸಿದರು. ಠಾಣಾ ಸಿಬ್ಬಂದಿ ಮಾರುತಿ ಕಾರ್ಯಕ್ರಮ ನಿರೂಪಿಸಿದರು.
- Advertisement -