Sunday, June 29, 2025
spot_imgspot_img
spot_imgspot_img

ಪುತ್ತೂರು: ದ.ಕ ಬಿಜೆಪಿಯ ನೂತನ ಉಪಾಧ್ಯಕ್ಷರಾಗಿ ಆಯ್ಕೆಯಾದ ಪ್ರಸನ್ನ ಮಾರ್ತ ಪುತ್ತೂರು ಬಿಜೆಪಿ ಕಛೇರಿಗೆ ಭೇಟಿ

- Advertisement -
- Advertisement -

ಪುತ್ತೂರು: ದಕ್ಷಿಣ ಕನ್ನಡ ಬಿಜೆಪಿಯ ನೂತನ ಉಪಾಧ್ಯಕ್ಷರಾಗಿ ಆಯ್ಕೆಯಾದ ಪ್ರಸನ್ನ ಮಾರ್ತರವರು ಪುತ್ತೂರು ಬಿಜೆಪಿ ಕಛೇರಿಗೆ ಭೇಟಿ ನೀಡಿದರು.

ದಕ್ಷಿಣ ಕನ್ನಡ ಬಿಜೆಪಿಯ ನೂತನ ಉಪಾಧ್ಯಕ್ಷರಾಗಿ ಆಯ್ಕೆಯಾದ ನಂತರ ಪ್ರಥಮ ಬಾರಿಗೆ ಪುತ್ತೂರು ಬಿಜೆಪಿ ಕಛೇರಿಗೆ ಭೇಟಿ ನೀಡಿದ ಪ್ರಸನ್ನ ಮಾರ್ತರವರಿಗೆ ಮಂಡಲದ ವತಿಯಿಂದ ಗ್ರಾಮಾಂತರ ಮತ್ತು ನಗರ ಮಂಡಲ ಅಧ್ಯಕ್ಷರುಗಳಾದ ಸಾಜ ರಾಧಕೃಷ್ಣ ಆಳ್ವಾ, ಪಿ.ಜಗನ್ನೀವಾಸ ರಾವ್ ಹಾಗೂ ಮಾಜಿ ಶಾಸಕ ಸಂಜೀವ ಮಠಂದೂರುರವರು ಆತ್ಮೀಯವಾಗಿ ಸ್ವಾಗತಿಸಿ ಶುಭ ಹಾರೈಸಿದರು. ಇದೇ ಸಂದರ್ಭದಲ್ಲಿ ಕಛೇರಿಗೆ ಆಗಮಿಸಿದ ಪುತ್ತೂರಿನ ಖ್ಯಾತ ವೈದ್ಯ ಸುರೇಶ್ ಪುತ್ತೂರಾಯರು ಮಾರ್ತರನ್ನು ಅಭಿನಂದಿಸಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಸನ್ನ ಮಾರ್ತರವರು ನಿಮ್ಮೆಲ್ಲರ ಸಹಕಾರದಿಂದ ಹಿಂದುತ್ವದ ಆಧಾರದಲ್ಲಿ ಪಾರ್ಟಿಯನ್ನು ಪುತ್ತೂರಿನಲ್ಲಿ ಬಲಪಡಿಸಲು ಒಗ್ಗಟ್ಟಾಗಿ ಕೆಲಸ ಮಾಡುವ ಎಂದು ಹೇಳಿದರು.

ಈ ಸಂದರ್ಭದಲ್ಲಿ ಪುತ್ತೂರು ನಗರ ಮತ್ತು ಗ್ರಾಮಾಂತರ ಮಂಡಲದ ನಿಯೋಜಿತ ಅಧ್ಯಕ್ಷರುಗಳಾದ ಶಿವಕುಮಾರ್ ಮತ್ತು ದಯಾನಂದ ಶೆಟ್ಟಿ, ಜಿಲ್ಲಾ ಕಾರ್ಯದರ್ಶಿ ವಿದ್ಯಾ ಗೌರಿ, ಹಾಗೂ ಉಪಾಧ್ಯಕ್ಷರಾಗಿ ನಿಯೋಜಿತರಾಗಿರುವ ಹರಿಪ್ರಸಾದ್ ಯಾದವ್, ಯುವರಾಜ್ ಪೆರಿಯತ್ತೋಡಿ, ಪ್ರಧಾನಕಾರ್ಯದರ್ಶಿಗಳಾದ ಪುರುಷೋತ್ತಮ ಮುಂಗ್ಲಿಮನೆ, ಜಯಶ್ರೀ ಶೆಟ್ಟಿ, ನಿಯೋಜಿತ ಪ್ರಧಾನ ಕಾರ್ಯದರ್ಶಿಗಳಾದ ಉಮೇಶ್ ಕೋಡಿಬೈಲು, ಅನಿಲ್ ತೆಂಕಿಲ, ಕಾರ್ಯದರ್ಶಿಯಾಗಿ ನಿಯೋಜಿತರಾಗಿರುವ ಪುನೀತ್ ಮಾಡತ್ತಾರು, ನಗರಸಭಾ ಸದಸ್ಯೆ ಶಶಿಕಲಾ, ಯುವಮೋರ್ಚ ನಗರ ಅಧ್ಯಕ್ಷ ನಿತೇಶ್ ಗೋವರ್ಧನ್ ನಗರ, ರೈತಮೋರ್ಚ ಅಧ್ಯಕ್ಷ ಸುರೇಶ್ ಕಣ್ಣರಾಯ, ಮಹಾಬಲ ರೈ, ಶರತ್ ಚಂದ್ರ ಬೈಪಡಿತ್ತಾಯ, ಜಯರಾಮ ವರ್ಮ, ಮಹಾಲಿಂಗ ಪಾಟಾಳಿ, ಜಿಲ್ಲಾ ರೈತಮೋರ್ಚ ಕಿಶೋರ್ ಬೇರಿಕೆ ಮೊದಲಾದವರು ಉಪಸ್ಥಿತರಿದ್ದರು.

- Advertisement -

Related news

error: Content is protected !!