- Advertisement -
- Advertisement -
ಪುತ್ತೂರು: ಕೆಲವು ದಿನಗಳ ಹಿಂದೆ ರಿಕ್ಷಾ ವೊಂದು ಅಪಘಾತವಾಗಿ ತೀವ್ರ ಗಾಯಗೊಂಡು ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೇ ಮೃತಪಟ್ಟ ಘಟನೆ ಪುತ್ತೂರು ಕೂರ್ನಡ್ಕ ಎಂಬಲ್ಲಿ ನಡೆದಿದೆ.
ಮೃತಪಟ್ಟವರನ್ನು ಕೂರ್ನಡ್ಕ ಮರಿಲ್ ಐ.ಕೆ. ಕಂಪೌಂಡ್ ನಿವಾಸಿ ಮುಹಮ್ಮದ್ ರಫೀಕ್ (45) ಎಂದು ಗುರುತಿಸಲಾಗಿದೆ.
ಕೆಲವು ದಿನಗಳ ಹಿಂದೆ ಕೂರ್ನಡ್ಕ ಸಮೀಪ ತನ್ನ ಸ್ವಂತ ರಿಕ್ಷಾವನ್ನು ಚಲಾಯಿಸಿಕೊಂಡು ಹೋಗುತ್ತಿದ್ದ ವೇಳೆ ಅಪಘಾತಕ್ಕೀಡಾಗಿ ಗಂಭೀರ ಗಾಯಗೊಂಡು ಮಂಗಳೂರಿನ ಎ.ಜೆ. ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟರು.ಇವರು ಮುಹಮ್ಮದ್ ರಫೀಕ್ ರವರು ಈ ಹಿಂದೆ ಪುತ್ತೂರು ಬಸ್ ನಿಲ್ದಾಣದ ಬಳಿಯ ಎ.ಎಂ. ಕಾಂಪ್ಲೆಕ್ಸ್ ನಲ್ಲಿ ಸೈ ಎಂಬ ಮೊಬೈಲ್ ಶಾಪ್ ಹೊಂದಿದ್ದರು.
- Advertisement -