- Advertisement -
- Advertisement -
ಪುತ್ತೂರು: ಅನಾರೋಗ್ಯದಿಂದ ಶಾಲಾ ವಿದ್ಯಾರ್ಥಿಯೋರ್ವ ನಿಧನರಾದ ಘಟನೆ ಕೊಡಿಪ್ಪಾಡಿ ಗ್ರಾಮದ ಬಟ್ಟುಪಾಡಿ ಎಂಬಲ್ಲಿ ನಡೆದಿದೆ.
ಮೃತಪಟ್ಟ ವಿದ್ಯಾರ್ಥಿ ಬಟ್ಟುಪಾಡಿ ನಿವಾಸಿ, ಕೊಡಿಪ್ಪಾಡಿ ಶಾಲಾ 7ನೇ ತರಗತಿ ವಿದ್ಯಾರ್ಥಿ ಆಕಾಶ್ ಎಂದು ಗುರುತಿಸಲಾಗಿದೆ.
ಆಕಾಶ್ ಅವರ ತಂದೆ ಅನಿಲ್ ರಿಕ್ಷಾ ಚಾಲಕರಾಗಿದ್ದು, ಕೆಲ ಸಮಯದ ಹಿಂದೆ ನಿಧನ ಹೊಂದಿದ್ದರು. ಆ ಬಳಿಕ ಆಕಾಶ್ ಅನಾರೋಗ್ಯದಿಂದ ಬಳಲುತ್ತಿದ್ದರು. ಮಂಗಳೂರು ಆಸ್ಪತ್ರೆಗೆ ಚಿಕಿತ್ಸೆ ಫಲಕಾರಿಯಾಗದೆ ನಿಧನರಾದರು. ಮೃತರು ತಾಯಿ, ಸಹೋದರ, ಸಹೋದರಿಯನ್ನು ಅಗಲಿದ್ದಾರೆ.
- Advertisement -