Friday, April 19, 2024
spot_imgspot_img
spot_imgspot_img

ಪುತ್ತೂರು : ವಿದ್ಯಾರ್ಥಿನಿ ಜತೆ ಅಸಭ್ಯ ವರ್ತನೆ-ಆರೋಪಿಯನ್ನು ಪೊಲೀಸರಿಗೊಪ್ಪಿಸಿದ ಹಿಂದೂ ಸಂಘಟನೆ ಕಾರ್ಯಕರ್ತರು

- Advertisement -G L Acharya panikkar
- Advertisement -

ಪುತ್ತೂರು : ಯುವತಿಯೋರ್ವಳಿಗೆ ಬಸ್‌ನಲ್ಲಿ ಕಿರುಕುಳ ಕೊಡುತ್ತಿದ್ದ ಆರೋಪಿಯೋರ್ವನನ್ನು ಪ್ರಯಾಣಿಕರು ರೆಡ್ ಹ್ಯಾಂಡ್ ಆಗಿ ಹಿಡಿದು ಪೋಲೀಸರಿಗೊಪ್ಪಿಸಿರುವ ಘಟನೆ ಮಾ. 8 ರಂದು ಗಡಿಪಿಲದಲ್ಲಿ ನಡೆದಿದೆ.

ಈ ಕುರಿತು ಪುತ್ತೂರು ನಗರ ಪೋಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ.

ಆರೋಪಿಯನ್ನು ಪುತ್ತೂರಿನ ಬಸ್ ನಿಲ್ದಾಣದ ಬಳಿ ಅಂಗಡಿ ಹೊಂದಿರುವ ಬೆಟ್ಟಂಪಾಡಿಯ ನೌಫಲ್ ಎಂದು ಹೆಸರಿಸಲಾಗಿದೆ.

ಮಾ. 8ರಂದು ಸಂಜೆ ಪುತ್ತೂರು- ಸವಣೂರು -ಆಲಂಕಾರು ಮೂಲಕ ಕಡಬ ಹೋಗುತ್ತಿದ್ದ ಬಸ್ಸಲ್ಲಿ ಪ್ರಯಾಣಿಸುತ್ತಿದ್ದ ಖಾಸಗಿ ಆಸ್ಪತ್ರೆಯ ವೈದ್ಯ ವಿದ್ಯಾರ್ಥಿನಿಯೋರ್ವರ ಜತೆ ನೌಫಾಲ್ ಅಸಭ್ಯವಾಗಿ ವರ್ತಿಸಿದ್ದ ಎನ್ನಲಾಗಿದೆ.

ಈ ವಿಷಯ ತಿಳಿದು ಹಿಂದೂ ಸಂಘಟನೆಯ ಕಾರ್ಯಕರ್ತರು ಬಸ್ ವೀರಮಂಗಲ ಕ್ರಾಸ್‌ನ ಗಡಿಪಿಲ ತಲುಪುತಿದ್ದಂತೆ ಬಸ್ ನ್ನು ನಿಲ್ಲಿಸಿ ಆರೋಪಿಯನ್ನು ವಿಚಾರಿಸಿ ಬಳಿಕ ಸ್ಥಳಕ್ಕೆ ಆಗಮಿಸಿದ ಪೊಲೀಸರಿಗೆ ಒಪ್ಪಿಸಿದರು.

- Advertisement -

Related news

error: Content is protected !!