- Advertisement -
- Advertisement -
ಪುತ್ತೂರು : ಯುವತಿಯೋರ್ವಳಿಗೆ ಬಸ್ನಲ್ಲಿ ಕಿರುಕುಳ ಕೊಡುತ್ತಿದ್ದ ಆರೋಪಿಯೋರ್ವನನ್ನು ಪ್ರಯಾಣಿಕರು ರೆಡ್ ಹ್ಯಾಂಡ್ ಆಗಿ ಹಿಡಿದು ಪೋಲೀಸರಿಗೊಪ್ಪಿಸಿರುವ ಘಟನೆ ಮಾ. 8 ರಂದು ಗಡಿಪಿಲದಲ್ಲಿ ನಡೆದಿದೆ.
ಈ ಕುರಿತು ಪುತ್ತೂರು ನಗರ ಪೋಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ.
ಆರೋಪಿಯನ್ನು ಪುತ್ತೂರಿನ ಬಸ್ ನಿಲ್ದಾಣದ ಬಳಿ ಅಂಗಡಿ ಹೊಂದಿರುವ ಬೆಟ್ಟಂಪಾಡಿಯ ನೌಫಲ್ ಎಂದು ಹೆಸರಿಸಲಾಗಿದೆ.
ಮಾ. 8ರಂದು ಸಂಜೆ ಪುತ್ತೂರು- ಸವಣೂರು -ಆಲಂಕಾರು ಮೂಲಕ ಕಡಬ ಹೋಗುತ್ತಿದ್ದ ಬಸ್ಸಲ್ಲಿ ಪ್ರಯಾಣಿಸುತ್ತಿದ್ದ ಖಾಸಗಿ ಆಸ್ಪತ್ರೆಯ ವೈದ್ಯ ವಿದ್ಯಾರ್ಥಿನಿಯೋರ್ವರ ಜತೆ ನೌಫಾಲ್ ಅಸಭ್ಯವಾಗಿ ವರ್ತಿಸಿದ್ದ ಎನ್ನಲಾಗಿದೆ.
ಈ ವಿಷಯ ತಿಳಿದು ಹಿಂದೂ ಸಂಘಟನೆಯ ಕಾರ್ಯಕರ್ತರು ಬಸ್ ವೀರಮಂಗಲ ಕ್ರಾಸ್ನ ಗಡಿಪಿಲ ತಲುಪುತಿದ್ದಂತೆ ಬಸ್ ನ್ನು ನಿಲ್ಲಿಸಿ ಆರೋಪಿಯನ್ನು ವಿಚಾರಿಸಿ ಬಳಿಕ ಸ್ಥಳಕ್ಕೆ ಆಗಮಿಸಿದ ಪೊಲೀಸರಿಗೆ ಒಪ್ಪಿಸಿದರು.
- Advertisement -