Friday, April 26, 2024
spot_imgspot_img
spot_imgspot_img

ಪುತ್ತೂರು: ನೇಣು ಬಿಗಿದ ಸ್ಧಿತಿಯಲ್ಲಿ ಯುವಕನ ಶವ ಪತ್ತೆ

- Advertisement -G L Acharya panikkar
- Advertisement -

ಪುತ್ತೂರು: ಅವಿವಾಹಿತ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಿಡ್ಪಳ್ಳಿ ಗ್ರಾಮದ ಪೊಯ್ಯೆತ್ತಡ್ಕ ಎಂಬಲ್ಲಿ ನಡೆದಿದೆ.

ನಿಡ್ಪಳ್ಳಿ ಪೊಯ್ಯೆತ್ತಡ್ಕ ಐತ್ತಪ್ಪ ನಾಯ್ಕರವರ ಪುತ್ರ ವಿಶ್ವನಾಥ ಮೃತಪಟ್ಟವರಾಗಿದ್ದಾರೆ. ಕೂಲಿ ಕಾರ್ಮಿಕರಾಗಿರುವ ವಿಶ್ವನಾಥರವರ ಮನೆಯ ಸಮೀಪದಲ್ಲಿರುವ ಕಟ್ಟಡದ ಹೊರ ಜಗಲಿಯ ಪಕ್ಕಾಸಿಗೆ ನೈಲಾನ್ ಹಗ್ಗದಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಸ್ಥಿತಿಯಲ್ಲಿ ಮುಂಜಾನೆ ಪತ್ತೆಯಾಗಿದೆ.

ಕಾಲು ನೆಲಕ್ಕೆ ತಾಕುವ ಸ್ಧಿತಿಯಲ್ಲಿ ಶವವಿದ್ದು, ಸಾವಿನ ಕುರಿತು ಸಾರ್ವಜನಿಕರು ಅನುಮಾನ ವ್ಯಕ್ತಪಡಿಸಿದ್ದಾರೆ. ಘಟನ ಸ್ಥಳಕ್ಕೆ ಸಂಪ್ಯ ಪೊಲೀಸರು ಅಗಮಿಸಿ ತನಿಖೆ ನಡೆಸುತ್ತಿದ್ದಾರೆ.

- Advertisement -

Related news

error: Content is protected !!