Thursday, April 18, 2024
spot_imgspot_img
spot_imgspot_img

ಪುತ್ತೂರು: ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಯುವತಿ ನಾಪತ್ತೆ!

- Advertisement -G L Acharya panikkar
- Advertisement -

ಪುತ್ತೂರು: ಪುತ್ತೂರು ತಾಲೂಕಿನ ನರಿಮೊಗರು ಗ್ರಾಮದ ಕರ್ಗಲ್ಲು ಎಂಬಲ್ಲಿ ಮನೆಯಿಂದ ಹೊರಗಡೆ ಹೋಗಿದ್ದ ಯುವತಿ ವಾಪಸ್ಸು ಮನೆಗೆ ಹಿಂತುರುಗದೆ ನಾಪತ್ತೆಯಾದ ಘಟನೆ ನಡೆದಿದೆ. ಈ ಬಗ್ಗೆ ಯುವತಿಯ ಪೋಷಕರು ಪುತ್ತೂರು ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ನರಿಮೊಗರು ಗ್ರಾಮದ ಕರ್ಗಲ್ಲು ನಿವಾಸಿ ಅಣ್ಣುಪೂಜಾರಿ ಅವರ ಪುತ್ರಿ ವಿಜೇತ(23) ನಾಪತ್ತೆಯಾದ ಯುವತಿ . ನಾಪತ್ತೆಯಾದ ವಿಜೇತ ಮಾನಸಿಕ ಖಿನ್ನತೆಗೆ ಒಳಗಾಗಿದ್ದು ಕಳೆದ ಹಲವಾರು ವರ್ಷಗಳಿಂದ ಹುಷಾರಿಲ್ಲದೇ ಮನೆಯಲ್ಲಿದ್ದರು.

ಜೂ.4ರಂದು ಬೆಳಿಗ್ಗೆ ಆಕೆ ವಾಸವಿದ್ದ ಮನೆಯಿಂದ ಹೊರಗೆ ತೆರಳಿದ ಬಳಿಕ ಮನೆಗೆ ಬಾರದೆ ನಾಪತ್ತೆಯಾಗಿದ್ದು, ಈ ಕುರಿತು ಎಲ್ಲಾ ಕಡೆ ಹುಡುಕಾಡಿ, ಸಂಬಂಧಿಕರಲ್ಲಿ ವಿಚಾರಿಸಿದರೂ ಪತ್ತೆಯಾಗದ ಹಿನ್ನೆಲೆಯಲ್ಲಿ ಅಣ್ಣು ಪೂಜಾರಿ ಅವರು ಪುತ್ತೂರು ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

- Advertisement -

Related news

error: Content is protected !!