ಪುತ್ತೂರು: ಹಿಂದೂ ಯುವತಿಯ ಜೊತೆಗಿದ್ದ ಮುಸ್ಲಿಂ ಯುವಕನ ಮೇಲೆ ಗುಂಪೊಂದು ಹಲ್ಲೆ ನಡೆಸಿದ ಘಟನೆ ಪುತ್ತೂರಿನಲ್ಲಿ ನಡೆದಿದೆ.ಕೃತಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಮರೀಲ್ ಕಾಡುಮನೆ ನಿವಾಸಿ ಮಹಮ್ಮದ್ ಫಾರಿಶ್ (18) ಹಲ್ಲೆಗೊಳಗಾದ ವಿದ್ಯಾರ್ಥಿ.
ಮಹಮ್ಮದ್ ಫಾರಿಶ್ ಹಾಗೂ ಆತನ ಜೊತೆಗಿದ್ದ ಹಿಂದೂ ಯುವತಿ ಇಬ್ಬರೂ ವಿದ್ಯಾರ್ಥಿಗಳಾಗಿದ್ದು, ಇಬ್ಬರೂ ನಗರದ ಮಾಲ್ವೊಂದರ ಚಿತ್ರಮಂದಿರದಲ್ಲಿ ಒಟ್ಟಿಗೆ ಸಿನಿಮಾ ಸಿನಿಮಾ ವೀಕ್ಷಿಸಿ ಬಳಿಕ ಜ್ಯೂಸ್ ಕುಡಿಯಲು ಜೊತೆಯಲ್ಲೇ ಹೋಗಿದ್ದರು. ಈ ವೇಳೆ ಅಲ್ಲಿಗೆ ಬಂದ ಯುವಕರ ಗುಂಪೊಂದು ಮಹಮ್ಮದ್ ಫಾರಿಶ್ ಮೇಲೆ ಏಕಾಏಕಿ ಹಲ್ಲೆ ನಡೆಸಿದ್ದಾರೆ” ಎಂದು ಹೇಳಲಾಗಿದೆ. ಹಲ್ಲೆಗೊಳದಾಗ ಯುವಕ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದಾನೆ.
ಹಲ್ಲೆ ನಡೆಸಿದ ಮೂವರ ಸುಳಿವು ಸಿಕ್ಕಿದ್ದು, ಪ್ರದೀಪ್ ಎಂಬಾತನನ್ನು ಬಂಧಿಸಿದ್ದಾರೆ. ಉಳಿದವರ ಸುಳಿವುಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ. ಈ ಬಗ್ಗೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸ್ ಇನ್ಸ್ಪೆಕ್ಟರ್ ಸುನಿಲ್ ಕುಮಾರ್ ಹಾಗೂ ಪಿಎಸ್ಐ ಶ್ರೀ ಕಾಂತ್ ರಾಥೋಡ್ ನೇತೃತ್ವದಲ್ಲಿ ಪೊಲೀಸರು ತನಿಖೆ ಆರಂಭಿಸಿದ್ದಾರೆ.