- Advertisement -
- Advertisement -
ಪುತ್ತೂರು: ವಿವೇಕಾನಂದ ಪದವಿ ಪೂರ್ವ ಕಾಲೇಜು ಮತ್ತು ಸಿಎ ತರಬೇತಿ ಸಂಸ್ಥೆ ವಿಕಾಸ್ ಇದರ ಸಹಯೋಗದೊಂದಿಗೆ ಉಪನ್ಯಾಸಕರಿಗೆ ಮತ್ತು ಆಸಕ್ತರಿಗೆ ವಾಣಿಜ್ಯ ಶಿಕ್ಷಣ ಮತ್ತು ಅವಕಾಶಗಳು ಎಂಬ ವಿಷಯದ ಕುರಿತು ಮಾಹಿತಿ ಕಾರ್ಯಗಾರವನ್ನು ಆ.4 ರಂದು ಪೂರ್ವಾಹ್ನ 10 ಗಂಟೆಗೆ ಕಾಲೇಜಿನ ಸಭಾಭವನದಲ್ಲಿ ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಪುತ್ತೂರಿನ ವೃತ್ತಿಪರ ಕೋರ್ಸ್ ತರಬೇತುದಾರ ರಾಜ್ಗಣೇಶ್ ಕಾಮತ್ ಮಾಹಿತಿ ನೀಡಲಿದ್ದಾರೆ. ಆಸಕ್ತರಿಗೆ ಇದರ ಜೊತೆಗೆ ಸಿಎ ತರಬೇತಿಯು ನಡೆಯಲಿದೆ.
ಇದನ್ನೂ ಓದಿ: ಹಾಕಿಯಲ್ಲಿ ಮುಗ್ಗರಿಸಿದ ಭಾರತೀಯ ಪಡೆ; ಮುಂದೆ ಕಂಚಿಗಾಗಿ ಸೆಣಸಾಟ
ಈ ಮಾಹಿತಿ ಕಾರ್ಯಗಾರದಲ್ಲಿ ಭಾಗವಹಿಸಲು ಇಚ್ಛಿಸಿದಲ್ಲಿ ದೂರವಾಣಿ ಸಂಖ್ಯೆ 8971634042 ಅಥವಾ 9686524162 ಯನ್ನು ಸಂಪರ್ಕಿಸಬೇಕೆಂದು ಸೂಚಿಸಲಾಗಿದೆ.
- Advertisement -