Saturday, June 28, 2025
spot_imgspot_img
spot_imgspot_img

ರಾಹುಲ್‌ ಗಾಂಧಿಗೆ ಸಂಸತ್ತಿನೊಳಗೇ ಹೋಗಿ ಕೆನ್ನೆಗೆ ಬಾರಿಸಬೇಕು: ಭರತ್‌ ಶೆಟ್ಟಿ ಕೆಂಡಾಮಂಡಲ

- Advertisement -
- Advertisement -

ರಾಹುಲ್‌ ಗಾಂಧಿಗೆ ಸಂಸತ್ತಿನೊಳಗೇ ಹೋಗಿ ಬಾಗಿಲು ಹಾಕಿಕೊಂಡು ಕೆನ್ನೆಗೆ ಎರಡು ಬಾರಿಸಿಬೇಕು ಎಂದು ಶಾಸಕ ಭರತ್ ಶೆಟ್ಟಿ ಮಂಗಳೂರಿನಲ್ಲಿ ಹೇಳಿಕೆ ನೀಡಿದ್ದಾರೆ.

ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್‌ ಗಾಂಧಿ ಹಿಂದೂ ವಿರೋಧಿ ಹೇಳಿಕೆ ನೀಡಿದ್ದಾರೆಂದು ಆರೋಪಿಸಿ ಮಂಗಳೂರಿನಲ್ಲಿಂದು ಬಿಜೆಪಿ ಯುವಮೋರ್ಚಾ ಘಟಕ ಪ್ರತಿಭಟನೆ ನಡೆಸಿತು. ಮಳೆಯನ್ನೂ ಲೆಕ್ಕಿಸದೇ ರಾಹುಲ್‌ ಗಾಂಧಿ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದರು. ಪ್ರತಿಭಟನೆ ವೇಳೆ ಬಂದ ಶ್ವಾನವನ್ನು ತೋರಿಸಿ ರಾಹುಲ್‌ ಗಾಂಧಿಗೆ ಹೋಲಿಸಿ ಲೇವಡಿ ಮಾಡಿದರು. ಅಲ್ಲದೇ ರಾಹುಲ್ ಗಾಂಧಿ ಪ್ರತಿಕೃತಿ ಧಹಿಸಿ ಆಕ್ರೋಶ ಹೊರಹಾಕಿದರು.

ಬಿಜೆಪಿ ಪ್ರತಿಭಟನೆಯಲ್ಲಿ ಮಾತನಾಡಿದ ಶಾಸಕ ಭರತ್ ಶೆಟ್ಟಿಯವರು ರಾಹುಲ್ ಗಾಂಧಿಗೆ ಯಾರಾದ್ರೂ ಎರಡು ಕೆನ್ನೆಗೆ ಬಾರಿಸಬೇಕು ಅನಿಸ್ತಾ ಇದೆ. ಆಗ ಇದಕ್ಕೆ ಏಳೆಂಟು ಎಫ್‌ಐಆರ್ ಆಗ್ತಿತ್ತು ಅಷ್ಟೇ. ರಾಹುಲ್ ಗಾಂಧಿ ಶಿವನ ಫೋಟೊ ಹಿಡಿದು ನಿಂತಿದ್ದ ಈ ಹುಚ್ಚನಿಗೆ ಶಿವ ಮೂರನೇ ಕಣ್ಣು ಬಿಟ್ಟರೆ ಸುಟ್ಟು ಬೂದಿಯಾಗ್ತಾನೆ ಅಂತ ಗೊತ್ತಿಲ್ಲ. ಅವನು ಹಿಂದೂ ವಿರೋಧಿ ನೀತಿಯನ್ನು ಅಳವಡಿಸಿಕೊಂಡಿದ್ದಾನೆ.ನಾವು ಅವನಿಗೆ ಯಾವ ಶಬ್ದ ಪ್ರಯೋಗಿಸಬಹುದು ಅಂತ ನೋಡಿ. ರಾಹುಲ್ ಗಾಂಧಿ ಒಬ್ಬ ದೊಡ್ಡ ಹುಚ್ಚ ಅನ್ನೋದು ಸ್ಪಷ್ಟ ಹಿಂದೂಗಳ ಬಗ್ಗೆ ಏನು ಮಾತನಾಡಿದ್ರೂ ಕೇಳ್ತಾರೆ ಎಂಬ ಭಾವನೆ ರಾಹುಲ್ ಗಾಂಧಿಗೆ ಇರಬಹುದು. ಹಿಂದೂಗಳ ಬಗ್ಗೆ ಏನು ಮಾತನಾಡಿದ್ರೂ ಕೇಳ್ತಾರೆ ಎಂಬ ಭಾವನೆ ರಾಹುಲ್ ಗಾಂಧಿಗೆ ಇರಬಹುದು. ಅಲ್ಲಿ ಅವರು ಬೊಗಳಿದರೆ ಇಲ್ಲಿನ ನಾಯಕರು ಬಾಲ ಬಿಚ್ಚಲು ಶುರು ಮಾಡ್ತಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.

- Advertisement -

Related news

error: Content is protected !!