ಪುತ್ತೂರು: ರೈ ಎಸ್ಟೇಟ್ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ ಜನಸೇವಾ ಕೇಂದ್ರ ಪುತ್ತೂರು ಇದರ ಆಶ್ರಯದಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಅಶೋಕ್ ಕುಮಾರ್ ರೈ ಇವರ ನೇತೃತ್ವದಲ್ಲಿ ಟ್ರಸ್ಟ್ನ ಫಲಾನುಭವಿಗಳ ಸಮಾವೇಶ ಮತ್ತು ವಸ್ತ್ರ ವಿತರಣಾ ಕಾರ್ಯಕ್ರಮ ಹಾಗೂ ಗೂಡುದೀಪ ಸ್ಪರ್ಧೆಯು ನ.13 ರಂದು ನಡೆಯಲಿದೆ.
ಈ ಕಾರ್ಯಕ್ರಮವು ನ.13 ರಂದು ಪುತ್ತೂರು ಕೊಂಬೆಟ್ಟು ಜ್ಯೂನಿಯರ್ ಕಾಲೇಜು ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಟ್ರಸ್ಟ್ ಸಂಸ್ಥಾಪಕ, ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ತಿಳಿಸಿದ್ದಾರೆ.
ಈ ಬಾರಿ 50000 ಮಂದಿಗೆ ವಸ್ತ್ರ ವಿತರಣೆ ಮತ್ತು ಸಹ ಭೋಜನ ನಡೆಯಲಿದ್ದು, ವ್ಯವಸ್ಥಿತವಾಗಿ ನಡೆಯಲು ಈಗಾಗಲೇ ಎಲ್ಲಾ ರೀತಿಯ ಪೂರ್ವ ಸಿದ್ಧತೆ ನಡೆಸಲಾಗುತ್ತಿದೆ. 1 ಕೋ.70 ಲಕ್ಷ ವೆಚ್ಚದಲ್ಲಿ ಬೆಳಿಗ್ಗೆ 9 ಗಂಟೆಯಿಂದ 5 ಗಂಟೆ ತನಕ ನಡೆಯಲಿದ್ದು, ಪುರುಷ, ಮಹಿಳೆ, ಮಕ್ಕಳಿಗೆ, ಹಾಗೂ ವಿಶೇಷ ಚೇತನರಿಗೆ ಪ್ರತ್ಯೇಕ ಕೌಂಟರ್ ವ್ಯವಸ್ಥೆ ಮಾಡಲಾಗಿದೆ. ವಿಶೇಷ ಆಕರ್ಷಣೆಯಾಗಿ ಗೂಡುದೀಪ ಸ್ಪರ್ಧೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.