- Advertisement -
- Advertisement -
ರೈಲು ಹಳಿ ದಾಟುತ್ತಿದ್ದ ವೇಳೆ ರೈಲು ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಮಹಿಳೆಯರು ಮೃತಪಟ್ಟ ಘಟನೆ ಮಂಗಳೂರು ನಗರದ ಜಪ್ಪು ಮಹಾಕಾಳಿಪಡ್ಪು ಬಳಿ ಇಂದು ಬೆಳಗ್ಗೆ ನಡೆದಿದೆ.
ಸ್ಥಳೀಯ ನಿವಾಸಿಗಳಾದ ವಸಂತಿ (50 ವ) ಮತ್ತು ಪ್ರೇಮಾ (48 ವ) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಬೀಡಿ ಕಾರ್ಮಿಕರಾಗಿದ್ದ ಇವರಿಬ್ಬರು ದಿನನಿತ್ಯ ಕುಡುಪ್ಪಾಡಿ ದೋಟ ಎಂಬಲ್ಲಿಂದ ಮಹಾಕಾಳಿಪಡ್ಪುವಿನಲ್ಲಿರುವ ಬೀಡಿ ಬ್ರ್ಯಾಂಚ್ ಗೆ ರೈಲು ಹಳಿಯನ್ನು ದಾಟಿ ಬೀಡಿ ಕೊಂಡೊಯ್ಯುತ್ತಿದ್ದರು.
ಅದರಂತೆ ಇಂದು ಬೆಳಗ್ಗೆಯೂ ಹಳಿ ದಾಟುತ್ತಿದ್ದಾಗ ಕೇರಳ ಕಡೆಯಿಂದ ಮಂಗಳೂರಿಗೆ ಬರುತ್ತಿದ್ದ ರೈಲಿನಡಿಗೆ ಸಿಲುಕಿ ಮೃತಪಟ್ಟಿದ್ದಾರೆ ಎನ್ನಲಾಗಿದೆ. ರೈಲ್ವೆ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸುತ್ತಿದ್ದಾರೆ.
- Advertisement -