Friday, May 23, 2025
spot_imgspot_img
spot_imgspot_img

ರೈಲ್ವೆ ಪರೀಕ್ಷೆ: ಜನಿವಾರ, ಮಂಗಳಸೂತ್ರ ಧರಿಸಲು ಅವಕಾಶ ನೀಡುವಂತೆ ಸಚಿವರ ಸೂಚನೆ: ಸಂಸದ ಕ್ಯಾ. ಚೌಟ

- Advertisement -
- Advertisement -

ಮಂಗಳೂರು: ರೈಲ್ವೆ ಇಲಾಖೆಯ ನರ್ಸಿಂಗ್ ಸೂಪರಿಂಟೆಂಡೆಂಟ್ ಪರೀಕ್ಷೆ ಬರೆಯುವವರು ಜನಿವಾರ, ಮಂಗಳಸೂತ್ರ ಮೊದಲಾದ ಧಾರ್ಮಿಕ ಚಿಹ್ನೆಗಳನ್ನು ಬಳಸುವುದಕ್ಕೆ ಅಡ್ಡಿಪಡಿಸಬಾರದು ಎಂದು ರೈಲ್ವೆ ಖಾತೆಯ ರಾಜ್ಯ ಸಚಿವ ಸೋಮಣ್ಣ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ ಎಂದು ಸಂಸದ ಕ್ಯಾ.ಬೃಜೇಶ್ ಚೌಟ ತಿಳಿಸಿದ್ದಾರೆ.

ರೈಲ್ವೆ ಇಲಾಖೆಯ ನರ್ಸಿಂಗ್ ಸುಪರಿಂಟೆಂಡೆಂಟ್ ಹುದ್ದೆಗೆ ಪರೀಕ್ಷೆಯು 29ರಂದು ಬೋಂದೆಲ್‌ನ ಮಣೇಲ್ ಶ್ರೀನಿವಾಸ್ ನಾಯಕ್ ಬೆಸೆಂಟ್ ವಿದ್ಯಾಕೇಂದ್ರದಲ್ಲಿ ನಡೆಯಲಿದೆ. ಆ ಪರೀಕ್ಷೆ ಬರೆಯಬೇಕಾದರೆ ಹಿಂದೂಗಳು ಅವರ ಧಾರ್ಮಿಕ ಚಿಹ್ನೆಗಳನ್ನು ತೆಗೆದು ಪರೀಕ್ಷೆ ಬರೆಯುವಂತೆ ಪ್ರವೇಶ ಪತ್ರದಲ್ಲಿ ಉಲ್ಲೇಖಿಸಲಾಗಿತ್ತು. ಇದಕ್ಕೆ ವಿಶ್ವಹಿಂದೂ ಪರಿಷತ್‌‌ ಬಜರಂಗದಳ ಆಕ್ಷೇಪ ವ್ಯಕ್ತಪಡಿಸಿತ್ತ. ಈ ಬಗ್ಗೆ ಸಂಸದರು ಸಚಿವರ ಗಮನ ಸೆಳೆದರು.

- Advertisement -

Related news

error: Content is protected !!