Sunday, May 19, 2024
spot_imgspot_img
spot_imgspot_img

ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಅಲ್ಪ ಪ್ರಮಾಣದಲ್ಲಿ ಮಳೆ ಸುರಿಯುವ ಸಾಧ್ಯತೆ

- Advertisement -G L Acharya panikkar
- Advertisement -

ಕರ್ನಾಟಕದ ಮಲೆನಾಡು, ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಅಲ್ಪ ಪ್ರಮಾಣದಲ್ಲಿ ಮಳೆ ಸುರಿಯುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಶಿವರಾತ್ರಿ ನಂತರ ಆರಂಭವಾದ ಮಳೆ ಮಾರುತಗಳು ಇನ್ನೆರಡು ದಿನಗಳ ಕಾಲ ಕರ್ನಾಟಕ ಕರಾವಳಿ ಭಾಗದಲ್ಲಿ ಭಾಗಶಃ ಮಳೆ ಸುರಿಯಲು ಕಾರಣವಾಗಲಿದೆ ಎಂದು ಇಲಾಖೆ ಹೇಳಿದೆ.

ಉತ್ತರ ಒಳನಾಡು ಹಾಗೂ ಮಧ್ಯ ಕರ್ನಾಟಕ ಭಾಗದಲ್ಲಿ ಒಣ ಹವೆ ಮುಂದುವರೆಯಲಿದೆ. ಎಲ್ಲೂ ಕೂಡಾ ಭಾರಿ ಮಳೆಯ ಭೀತಿ ಇಲ್ಲ, ಆದರೆ, ಕಲ್ಯಾಣ ಕರ್ನಾಟಕ ಭಾಗದಲ್ಲಿ ಬಿಸಿಲಿನ ತಾಪಮಾನ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಒಣಹವೆ ಮುಂದುವರೆಯಲಿದೆ.

- Advertisement -

Related news

error: Content is protected !!