- Advertisement -
- Advertisement -
ಬೆಂಗಳೂರು: ನಟ ರಜನಿಕಾಂತ್ ಬೆಂಗಳೂರಿಗೆ ಆಗಮಿಸಿದ್ದಾರೆ. ಭಾನುವಾರ ಸಂಜೆ ಚೆನ್ನೈನಿಂದ ರಸ್ತೆ ಮೂಲಕ ಬೆಂಗಳೂರಿಗೆ ಆಗಮಿಸಿದ ರಜನಿಕಾಂತ್ ತಮ್ಮ ಅಣ್ಣ ಸತ್ಯ ನಾರಾಯಣ ಅವರನ್ನು ಭೇಟಿ ಮಾಡಿದ್ದಾರೆ.

ಸತ್ಯ ನಾರಾಯಣ ಅವರು ಬೆಂಗಳೂರಿನಲ್ಲಿ ವಾಸವಾಗಿದ್ದಾರೆ. ರಾಜಕೀಯ ಪಕ್ಷ ಸ್ಥಾಪನೆಯ ಘೋಷಣೆ ಮಾಡಿದ ಬಳಿಕ ರಜನಿಕಾಂತ್ ಇದೇ ಮೊದಲ ಬಾರಿಗೆ ಚೆನ್ನೈನಿಂದ ಹೊರಗಡೆ ಪ್ರವಾಸ ಕೈಗೊಂಡಿದ್ದಾರೆ. ಜನವರಿ ತಿಂಗಳಲ್ಲಿ ರಾಜಕೀಯ ಪಕ್ಷ ರಚಿಸುವುದಾಗಿ ರಜನಿಕಾಂತ್ ಘೋಷಿಸಿದ್ದಾರೆ. ಈ ಹೇಳಿಕೆ ತಮಿಳುನಾಡು ರಾಜಕೀಯದಲ್ಲಿ ಈಗಾಗಲೇ ಸಂಚಲನ ಮೂಡಿಸಿದೆ.


- Advertisement -








