- Advertisement -
- Advertisement -
ವಿಟ್ಲ: ಕೇಂದ್ರ ಸರ್ಕಾರದ ರಾಸಾಯನಿಕ ಮತ್ತು ರಸಗೊಬ್ಬರ ಇಲಾಖೆಯ ಫರ್ಟಿಲೈಸರ್ ಅಡ್ವೈಸರ್ ಫಾರಂ(ಎಫ್.ಎ.ಎಫ್) ನ ಸದಸ್ಯರಾಗಿ ಆಯ್ಕೆಯಾಗಿರುವ ಕೆ. ರಾಜರಾಮ ಶೆಟ್ಟಿ ಕೋಲ್ಪೆಗುತ್ತು ರವರನ್ನು ಪುತ್ತೂರು ಬಿ.ಜೆ.ಪಿ. ಕಚೇರಿಯಲ್ಲಿ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಬಿಜೆಪಿ ಗ್ರಾಮಾಂತರ ಮಂಡಲದ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ ಮುಂಗ್ಲಿಮನೆ, ಮಂಡಲ ಕೋಶಾಧಿಕಾರಿ ರಮೇಶ್ ಭಟ್ ಎಂ.ಹೆಚ್.,
ಬಂಟ್ವಾಳ ಎ.ಪಿ.ಎಂ.ಸಿ. ಸದಸ್ಯ ಜಗದೀಶ್ ದೇವಸ್ಯ, ನಗರ ಸಭಾ ಸದಸ್ಯ ಶಿವರಾಮ ಸಪಲ್ಯ, ಆರ್ಯಾಪು ಗ್ರಾ.ಪಂ ಮಾಜಿ ಸದಸ್ಯ ಜಯಂತ ಶೆಟ್ಟಿ ಕಂಬಳತ್ತಡ್ಕ, ಕುಂಜೂರು ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯ ವಿಶ್ವನಾಥ ಮೊದಲಾದವರು ಉಪಸ್ಥಿತರಿದ್ದರು.
- Advertisement -