Sunday, June 29, 2025
spot_imgspot_img
spot_imgspot_img

ಪುತ್ತೂರು: ರಾಜೇಶ್ ಬನ್ನೂರು ಮನೆ ನೆಲಸಮಗೊಳಿಸಿದ ಪ್ರಕರಣ; ದರೋಡೆ ಪ್ರಕರಣ ದಾಖಲು ಮಾಡುವಂತೆ ಪೊಲೀಸರಲ್ಲಿ ಮನವಿ ಮಾಡಿದ್ದೇವೆ-ನಳಿನ್ ಕುಮಾರ್ ಕಟೀಲ್

- Advertisement -
- Advertisement -

ಪುತ್ತೂರು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾಗದಲ್ಲಿ ರಾಜೇಶ್ ಬನ್ನೂರು ವಾಸ್ತವ್ಯವಿದ್ದ ಮನೆಯನ್ನು ನೆಲಸಮಗೊಳಿಸಿದ್ದು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಧ್ಯಮದೊಂದಿಗೆ ಮತನಾಡಿದ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ‘ಮನೆಗೆಗಳಿಗೆ ಪರ್ಯಾಯ ವ್ಯವಸ್ಥೆ ಮಾಡದೇ ಯಾವುದೇ ನೋಟಿಸ್‌ಗಳನ್ನು ಕೊಟ್ಟಿಲ್ಲ, ಮನೆಗಳನ್ನು ಪರಿಶೀಲನೆ ಮಾಡಲು ಅವರಿಗೆ ಸಮಯವಕಾಶ ನೀಡಿಲ್ಲ,ಮನೆಯಲ್ಲಿದ್ದ ಸಾಮಾಗ್ರಿಗಳನ್ನು ತೆಗೆಯಲು ಅವಕಾಶ ನೀಡಿಲ್ಲ, ಪರ್ಯಾಯ ವ್ಯವಸ್ಥೆ ಮಾಡಿಲ್ಲ ಸಂವಿಧಾನ ಮತ್ತು ನ್ಯಾಯವನ್ನು ಮೀರಿ ಆಡಳಿತ ಮಂಡಳಿ ತೆಗೆದುಕೊಂಡ ಈ ತೀರ್ಮಾ ತಪ್ಪು. ಈ ಬಗ್ಗೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ದರೋಡೆ ಪ್ರಕರಣ ದಾಖಲು ಮಾಡುವಂತೆ ಪೊಲೀಸರಲ್ಲಿ ಮನವಿ ಮಾಡಿದ್ದೇವೆ ಎಂದು ಹೇಳಿದ್ದಾರೆ..

ರಾಜೇಶ್ ಬನ್ನೂರು ಅವರನ್ನು ಕಟ್ಟಿ ಹಾಕಿ ಮನೆ ಧ್ವಂಸ ಮಾಡಿದ ಗೂಂಡಾಗಳನ್ನು ಬಂಧಿಸಬೇಕು ಮತ್ತು ಕೃತ್ಯಕ್ಕೆ ಬಳಸಿದ ಜೆಸಿಬಿಗಳನ್ನು ವಶಕ್ಕೆ ಪಡೆಯಬೇಕೆಂದು ನಾವು ಆಗ್ರಹಿಸಿದ್ದವೆ. ಎರಡು ದಿನದಲ್ಲಿ ಗೂಂಡಾಗಳನ್ನು ಬಂದಿಸದಿದ್ದಲ್ಲಿ ಬಿಜೆಪಿ ಪ್ರತಿಭಟನೆ ಮಾಡಲಿದೆ ಎಂದು ಅವರು ತಿಳಿಸಿದ್ದಾರೆ.

- Advertisement -

Related news

error: Content is protected !!