Thursday, April 25, 2024
spot_imgspot_img
spot_imgspot_img

ಮಂಗಳೂರು: ಹೆಲಿಕಾಪ್ಟರ್ ಮೂಲಕ ಶೃಂಗೇರಿಗೆ ತೆರಳಿದ ರಾಷ್ಟ್ರಪತಿ ರಾಮನಾಥ್ ಕೋವಿಂದ್

- Advertisement -G L Acharya panikkar
- Advertisement -

ಮಂಗಳೂರು : ರಾಜ್ಯದ ಪ್ರವಾಸ ಕೈಗೊಂಡಿರುವ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಇಂದು ಶೃಂಗೇರಿಗೆ ತೆರಳಲು ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ ಮೂಲಕ ತೆರಳಿದರು.

ಇದನ್ನೂ ಓದಿ : ಮಂಗಳೂರು: ನಾಳೆ ಮಂಗಳೂರಿನಲ್ಲಿ ವಾಸ್ತವ್ಯ ಹೂಡಲಿದ್ದಾರೆ ದೇಶದ ಪ್ರಥಮ ಪ್ರಜೆ..! ಬಿಗಿ ಬಂದೋಬಸ್ತ್ ಗೆ ಸೂಚನೆ

ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಕೂಡ ರಾಷ್ಟ್ರಪತಿಯವರೊಂದಿಗೆ ತೆರಳಿದ್ದಾರೆ. ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಮಂಗಳೂರು ಮೇಯರ್ ಪ್ರೇಮಾನಂದ ಶೆಟ್ಟಿ, ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆವಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್, ಪೊಲೀಸ್ ಆಯುಕ್ತ ಶಶಿಕುಮಾರ್ ಅವರು ಜಿಲ್ಲಾಡಳಿತದ ಪರವಾಗಿ ರಾಷ್ಟ್ರಪತಿಯವರನ್ನು ಬೀಳ್ಕೊಟ್ಟರು.

ಶೃಂಗೇರಿ ಶಾರದಾಂಬೆ ಸನ್ನಿಧಿಗೆ ಭೇಟಿ..

ಶೃಂಗೇರಿಯ ಕೊರಡಕಲ್ಲು ಹೆಲಿಪ್ಯಾಡ್ ಗೆ ಹೆಲಿಕಾಪ್ಟರ್ ಮೂಲಕ ಬೆಳಿಗ್ಗೆ 11.30ಕ್ಕೆ ಆಗಮಿಸಿದ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರನ್ನು ಸಕಲ ರಕ್ಷಣೆಯೊಂದಿಗೆ ಹಾಗೂ ಸರ್ಕಾರಿ ಗೌರವದೊಂದಿಗೆ ಶ್ರೀ ಶಾರದಾ ಪೀಠಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದರು. ತಾಯಿ ಶಾರದೆಯ ಹಾಗೂ ಜಗದ್ಗುರುಗಳ ದರ್ಶನ ಪಡೆದರು. ಹಾಗೆಯೇ ಕರ್ನಾಟಕ ರಾಜ್ಯದ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಶಾರದಾಂಬೆಯ ಆಶೀರ್ವಾದ ಪಡೆದರು.

driving

- Advertisement -

Related news

error: Content is protected !!