Tuesday, April 23, 2024
spot_imgspot_img
spot_imgspot_img

ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಪುತ್ತೂರು ತಾಲೂಕಿನ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಪ್ರಥಮ ಸ್ಥಾನ ಗಳಿಸಿದ ವಿದ್ಯಾರ್ಥಿಗಳಿಗೆ ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಉಚಿತ ಶಿಕ್ಷಣ ಪಡೆಯುವ ಅವಕಾಶ

- Advertisement -G L Acharya panikkar
- Advertisement -

ಪುತ್ತೂರು: ನೈತಿಕ ಮೌಲ್ಯಗಳೊಂದಿಗೆ ಭಾರತೀಯ ಸಂಸ್ಕೃತಿಯ ತಳಹದಿಯಲ್ಲಿ ಭಾರತದ ಭಾವೀಪ್ರಜೆಗಳನ್ನು ನಿರ್ಮಾಣ ಮಾಡುವ ಉದ್ದೇಶದಿಂದ 1965 ರಲ್ಲಿ ಪುತ್ತೂರಿನ ಜನತೆಯ ಪ್ರೋತ್ಸಾಹದಿಂದ ರೂಪುಗೊಂಡ ವಿವೇಕಾನಂದ ವಿದ್ಯಾವರ್ಧಕ ಸಂಘ, ಪುತ್ತೂರು (ರಿ) ಇದರ ಮೊದಲ ಸಂಸ್ಥೆ ವಿವೇಕಾನಂದ ಪದವಿಪೂರ್ವ ಕಾಲೇಜು, 2019-20 ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಪುತ್ತೂರು ತಾಲೂಕಿನ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಪ್ರಥಮ ಸ್ಥಾನ ಗಳಿಸಿದ ವಿದ್ಯಾರ್ಥಿಗಳಿಗೆ ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಉಚಿತ ಶಿಕ್ಷಣ ಪಡೆಯುವ ಅವಕಾಶವನ್ನು ನೀಡುತ್ತಿದೆ.

ಪುತ್ತೂರು ಮತ್ತು ಆಸುಪಾಸಿನ ಗ್ರಾಮೀಣ ಮತ್ತು ಹಿಂದುಳಿದ ತಾಲೂಕುಗಳ ಪ್ರತಿಯೊಬ್ಬ ವಿದ್ಯಾರ್ಥಿಯ ಸರ್ವತೋಮುಖ ಬೆಳವಣಿಗೆಗೆ ಪೂರಕವಾದ ಶಿಕ್ಷಣವನ್ನು ನೀಡುವ ಉದ್ದೇಶದಿಂದ ಸ್ಥಾಪನೆಗೊಂಡ ವಿವೇಕಾನಂದ ಪದವಿಪೂರ್ವ ಕಾಲೇಜು ಮೌಲ್ಯಾಧರಿತ ಕಲಿಕೆ ಮತ್ತು ಉತ್ತಮ ಫಲಿತಾಂಶಗಳನ್ನು ನೀಡುವ ಪ್ರತಿಷ್ಠಿತ ಸಂಸ್ಥೆಗಳಲ್ಲೊಂದಾಗಿ ಕನ್ನಡನಾಡಿನಾದ್ಯಂತ ಗುರುತಿಸಿಕೊಂಡಿದೆ.

ಈಗಾಗಲೇ ಕಾಲೇಜಿನಲ್ಲಿ ಪ್ರಥಮ ಪಿಯುಸಿಗೆ ಸೇರಲು ಇಚ್ಚಿಸುವ ವಿದ್ಯಾರ್ಥಿಗಳಿಗಾಗಿ ದಾಖಲಾತಿ ಪ್ರಕ್ರಿಯೆಗಳು ಆರಂಭಗೊಂಡಿರುತ್ತದೆ. ವಿದ್ಯಾರ್ಥಿಗಳು ಇಂತಹ ಒಂದು ಸುವರ್ಣ ಅವಕಾಶ ವನ್ನು ಸದುಪಯೋಗಪಡಿಸಿಕೊಳ್ಳಬೇಕೆಂದು ಪ್ರಾಂಶುಪಾಲರು ಕಾಲೇಜಿನ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಈ ಯೋಜನೆಯ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕಾಲೇಜು ಸಂಪರ್ಕ ಸಂಖ್ಯೆ 08251237455 ಅಥವಾ 9449259330 ಗಳನ್ನು ಸಂಪರ್ಕಿಸಬಹುದು ಎಂದು ಪ್ರಾಂಶುಪಾಲ ಮಹೇಶ್ ನಿಟಿಲಾಪುರ ತಿಳಿಸಿದ್ದಾರೆ.

- Advertisement -

Related news

error: Content is protected !!