Thursday, September 17, 2026
spot_imgspot_img
spot_imgspot_img

ರೇಷನ್ ಕಾರ್ಡ್ ಇ-ಕೆವೈಸಿ ಅವಧಿ ಅ.20 ರ ವರೆಗೆ ವಿಸ್ತರಣೆ

- Advertisement -
- Advertisement -

ಬೆಂಗಳೂರು: ಜನರಿಗೆ ಅನುಕೂಲ ಆಗುವ ಎರಡು ಮಹತ್ವದ ನಿರ್ಧಾರವನ್ನು ಸರ್ಕಾರ ಮತ್ತು ಆಹಾರ ಇಲಾಖೆ ತೆಗೆದುಕೊಂಡಿದ್ದು, ಆಹಾರ ಇಲಾಖೆ ಸಚಿವ ರಿಜ್ವಾನ್ ಅರ್ಷದ್ ಈ ಬಗ್ಗೆ ಮಾಹಿತಿ ನೀಡಿದ್ದಾರೆ.

ರೇಷನ್ ಕಾರ್ಡ್ ಇ-ಕೆವೈಸಿ ಮಾಡಿಸುವ ಗಡುವನ್ನು ಸರ್ಕಾರ ವಿಸ್ತರಣೆ ಮಾಡಿದೆ. ಅಕ್ಟೋಬರ್ 20ರ ವರೆಗೂ ಅವಧಿ ವಿಸ್ತರಣೆ ಮಾಡಿ ಆಹಾರ ಇಲಾಖೆ ಆದೇಶ ಮಾಡಿದೆ. ಸರ್ವರ್ ಸಮಸ್ಯೆಯಿಂದಾಗಿ ಇ-ಕೆವೈಸಿ ಮಾಡಿಸಲು ಸಮಸ್ಯೆ ಆಗ್ತಿತ್ತು. ಈ ಹಿನ್ನೆಲೆ ಗಡುವು ವಿಸ್ತರಣೆ ಮಾಡಿರುವುದಾಗಿ ಸಚಿವ ರಿಜ್ವಾನ್ ಅರ್ಷದ್ ಮಾಹಿತಿ ನೀಡಿದ್ದಾರೆ.

ನ್ಯಾಯ ಬೆಲೆ ಅಂಗಡಿಗಳ ಸಮಯವನ್ನು ಸರ್ಕಾರ ಪರಿಷ್ಕರಣೆ ಮಾಡಿದೆ. ಕೂಲಿ ಕಾರ್ಮಿಕರು, ಆಟೋ ಚಾಲಕರು, ಕಟ್ಟಡ ಕಾರ್ಮಿಕರು ರೇಷನ್ ಪಡೆಯಲು ಸಹಕಾರಿ ಆಗುವಂತೆ ‌ನ್ಯಾಯಬೆಲೆ ಅಂಗಡಿ ಸಮಯವನ್ನ ಪರಿಷ್ಕರಣೆ ಮಾಡಲಾಗಿದ್ದು, ಅಕ್ಟೋಬರ್ 1 ರಿಂದ ನೂತನ ಸಮಯ ಜಾರಿ ಅಂತ ಸಚಿವ ರಿಜ್ವಾನ್ ಅರ್ಷದ್ ಮಾಹಿತಿ ನೀಡಿದ್ದಾರೆ.

ನ್ಯಾಯ ಬೆಲೆ ಅಂಗಡಿಗಳ ನೂತನ ಸಮಯ ಬೆಳಗ್ಗೆ 7 ಗಂಟೆಯಿಂದ ಮಧ್ಯಾಹ್ನ 12 ವರೆಗೆ ಮತ್ತು ಸಂಜೆ 4 ಗಂಟೆಯಿಂದ ರಾತ್ರಿ 8 ಗಂಟೆವರೆಗೆ ಪಡಿತರ ನೀಡಲು ಸಮಯ ನಿಗದಿ ಮಾಡಲಾಗಿರುವುದಾಗಿ ತಿಳಿದುಬಂದಿದೆ.

- Advertisement -

Related news

error: Content is protected !!