Tuesday, July 21, 2026
spot_imgspot_img
spot_imgspot_img

ಆರೇಳು ಬೀದಿ ನಾಯಿಗಳು ಏಕಕಾಲಕ್ಕೆ ದಾಳಿ – ಒಂದೂವರೆ ವರ್ಷದ ಕಂದಮ್ಮ ಸಾವು

- Advertisement -
- Advertisement -

ರಾಯಚೂರು: ಮನೆ ಮುಂದೆ ಆಟವಾಡುತ್ತಿದ್ದಾಗ ಬೀದಿನಾಯಿಗಳು ದಾಳಿ ಮಾಡಿದ ಪರಿಣಾಮ ಚಿಕಿತ್ಸೆ ಫಲಕಾರಿಯಾಗದೇ ಒಂದೂವರೆ ವರ್ಷದ ಮಗು ಸಾವನ್ನಪ್ಪಿದ ಹೃದಯ ವಿದ್ರಾವಕ ಘಟನೆ ರಾಯಚೂರಿನ ತಾಲೂಕಿನ ಕೆ.ಹಂಚಿಕಾಳ ಕ್ಯಾಂಪಿನಲ್ಲಿ ನಡೆದಿದೆ.

18 ತಿಂಗಳ ಅನಂ ಬಲಿಯಾದ ಪುಟ್ಟ ಬಾಲಕಿ. ನಿದ್ದೆಯಿಂದ ಎದ್ದು ಹೊರಗಡೆ ಬಂದಿದ್ದ ಮಗು ಮನೆ ಮುಂದೆ ಆಟವಾಡುತ್ತಿತ್ತು. ಈ ವೇಳೆ ಆರೇಳು ಬೀದಿ ನಾಯಿಗಳು ಏಕಕಾಲಕ್ಕೆ ದಾಳಿ ನಡೆಸಿದ್ದು, ಮಗುವನ್ನು ಎಳೆದಾಡಿ ಮನಬಂದಂತೆ ಕಚ್ಚಿವೆ. ಕೂಡಲೇ ಗಂಭೀರವಾಗಿ ಗಾಯಗೊಂಡಿದ್ದ ಮಗುವನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಇಂದು ಮಗು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

ಸಿಂಧನೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೀದಿ ನಾಯಿಗಳ ಹಾವಳಿಗೆ ಕಡಿವಾಣ ಹಾಕುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.

- Advertisement -

Related news

error: Content is protected !!