- Advertisement -
- Advertisement -
ರಾಯಚೂರು(ನ.11): ರಾಯಚೂರು ಜಿಲ್ಲೆಯ ಮಂಜರ್ಲಾ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಎಂಬಿಬಿಎಸ್ ಅಂತಿಮ ವರ್ಷದ ಮೂವರು ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ. ಸಾವನ್ನಪ್ಪಿದವರನ್ನು ಅಭಿಷೇಕ್, ಗಣೇಶ್ ಮತ್ತು ಬಸವರಾಜ್ ಎಂದು ಗುರುತಿಸಲಾಗಿದೆ. ಕಾರಿನಲ್ಲಿದ್ದ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಎರಡು ಕಾರುಗಳ ಮಧ್ಯೆ ಡಿಕ್ಕಿ ಹೊಡೆದ ಪರಿಣಾಮ ಈ ದುರಂತ ಸಂಭವಿಸಿದೆ. ಮೃತಪಟ್ಟ ವಿದ್ಯಾರ್ಥಿಗಳು ರಾಯಚೂರಿನ ನವೋದಯ ಮೆಡಿಕಲ್ ಕಾಲೇಜಿನಲ್ಲಿ ಕಲಿಯುತ್ತಿದ್ದರು ಎಂದು ವರದಿಯಾಗಿದೆ.ರಾಯಚೂರಿನ ಯರಗೇರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
- Advertisement -