Thursday, March 28, 2024
spot_imgspot_img
spot_imgspot_img

ಮಗಳನ್ನೇ ದೇವದಾಸಿ ಪದ್ಧತಿಗೆ ದೂಡಲು ಮುಂದಾದ ಪೋಷಕರು!

- Advertisement -G L Acharya panikkar
- Advertisement -

ರಾಯಚೂರು: ಪೋಷಕರೇ ಮಗಳನ್ನು ಬಲವಂತವಾಗಿ ದೇವದಾಸಿ ಪದ್ಧತಿಗೆ ನೂಕಲು ಮುಂದಾದ ಘಟನೆ ರಾಯಚೂರು ಜಿಲ್ಲೆ ದೇವದುರ್ಗ ಜಾಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಗ್ರಾಮವೊಂದರಲ್ಲಿ ನಡೆದಿದೆ. ಈ ಬಗ್ಗೆ ಯುವತಿಯೇ ಪೋಷಕರ ವಿರುದ್ಧ ಸ್ಥಳೀಯ ಪೊಲೀಸ್ ಠಾಣೆಗೆ ದೂರು ನೀಡಿದ್ದಾಳೆ.

21 ವರ್ಷದ ಯುವತಿಯನ್ನು ಪೋಷಕರೇ ದೇವದಾಸಿ ಪದ್ಧತಿಗೆ ದೂಡಲು ಮುಂದಾದಾಗ ಯುವತಿ ವಿರೋಧ ವ್ಯಕ್ತಪಡಿಸಿದ್ದು, ಅಕ್ಕನ ಗಂಡನೊಂದಿಗೆ ಯುವತಿ ಮದುವೆ ಮಾಡಲು ಪೋಷಕರು ಮುಂದಾಗಿದ್ದರು. ಈ ಬಗ್ಗೆ ಯುವತಿ ವಿರೋಧಿಸಿದಾಗ ದೇವದಾಸಿ ಮಾಡುವುದಾಗಿ ಬೆದರಿಕೆ ಹಾಕಿದ್ದು, ಇದರಿಂದ ನೊಂದ ವಿದ್ಯಾರ್ಥಿನಿ ಸಂಬಂಧಿಕರ ಮನೆಯಲ್ಲಿ ಆಶ್ರಯ ಪಡೆದು, ಸಿಡಿಪಿಒಗೆ ಮಾಹಿತಿ ನೀಡಿ, ಜಾಲಹಳ್ಳಿ ಠಾಣೆ ಪೊಲೀಸರಿಗೆ ದೂರು ನೀಡಿದ್ದಾಳೆ.

ಈ ಪ್ರಕರಣವನ್ನು ದಾಖಲಿಸಿಕೊಂಡ ಪೊಲೀಸರು ತನಿಖೆ ಕೈಗೊಂಡಿದ್ದು, ಯುವತಿ ದೇವದುರ್ಗದ ಮಹಿಳಾ ಪುನರ್ವಸತಿಯಲ್ಲಿ ಆಶ್ರಯ ಪಡೆದುಕೊಂಡಿದ್ದಾರೆನ್ನಲಾಗಿದೆ.

- Advertisement -

Related news

error: Content is protected !!