Friday, April 19, 2024
spot_imgspot_img
spot_imgspot_img

ಕೋವಿಡ್19 ನಿಯಂತ್ರಣಕ್ಕೆ ಬರುವವರೆಗೂ ರಿಕ್ರಿಯೇಷನ್ ಕ್ಲಬ್ ಮುಚ್ಚಿ: ದ.ಕ ಜಿಲ್ಲಾಧಿಕಾರಿ ಆದೇಶ

- Advertisement -G L Acharya panikkar
- Advertisement -

ಮಂಗಳೂರು: ಕೋವಿಡ್-19 ಸೋಂಕು ಹರಡದಂತೆ ಮುನ್ನೆಚ್ಚರಿಕೆ ವಹಿಸುವ ಹಿನ್ನೆಲೆಯಲ್ಲಿ ಸಾಮಾಜಿಕ ಅಂತರ ಕಾಪಾಡಲು ಸಾರ್ವಜನಿಕರ ಹಿತದೃಷ್ಟಿಯಿಂದ ದ.ಕ ಜಿಲ್ಲೆಯಾದ್ಯಂತ ಕಾರ್ಯಾಚರಿಸುತ್ತಿರುವ ರಿಕ್ರಿಯೇಷನ್ ಕ್ಲಬ್​ಗಳನ್ನು ತಾತ್ಕಾಲಿಕವಾಗಿ ಮುಚ್ವುವಂತೆ ಜಿಲ್ಲಾಧಿಕಾರಿ ಡಾ. ಕೆ.ವಿ.ರಾಜೇಂದ್ರ ಆದೇಶಿಸಿದ್ದಾರೆ.

ದ.ಕ ಜಿಲ್ಲಾ ಪೊಲೀಸ್ ಘಟಕ ವ್ಯಾಪ್ತಿಯ ಬಂಟ್ವಾಳ, ಬಿ.ಸಿ.ರೋಡ್, ಮೆಲ್ಕಾರ್, ಸಿದ್ಧಕಟ್ಟೆ, ಉಜಿರೆ, ಬೆಳ್ತಂಗಡಿ, ವೇಣೂರು, ಮಡಂತ್ಯಾರು, ಜಾಲ್ಸೂರು, ಪುತ್ತೂರು, ನೆಲ್ಯಾಡಿ ಮುಂತಾದ ಕಡೆಗಳಲ್ಲಿ ರಿಕ್ರಿಯೇಷನ್ ಕ್ಲಬ್​​​ಗಳಲ್ಲಿ‌ ಇಸ್ಪೀಟ್ ಆಡಲಾಗುತ್ತದೆ. ರಿಕ್ರಿಯೇಷನ್ ಕ್ಲಬ್​​ಗಳಲ್ಲಿ ಇಸ್ಪೀಟ್ ಆಡುವಾಗ ಕನಿಷ್ಠ 1 ಮೀ. ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಸಾಧ್ಯವಾಗೋದಿಲ್ಲ. ಇಸ್ಪೀಟ್ ಕಾರ್ಡ್​ಗಳಲ್ಲಿ ಆಡುವಾಗ ಒಬ್ಬರಿಂದ ಒಬ್ಬರಿಗೆ ಕಾರ್ಡ್​ಗಳನ್ನು ಹಂಚುವ ಸಂದರ್ಭ ಸೋಂಕಿತ ವ್ಯಕ್ತಿ ಇದ್ದಲ್ಲಿ ಅವರ ಮೂಲಕ ಸೋಂಕು ಹರಡುವ ಸಾಧ್ಯತೆ ಇರುತ್ತದೆ.

ಅಲ್ಲದೆ ರಿಕ್ರಿಯೇಷನ್ ಕ್ಲಬ್​​ನಲ್ಲಿ‌ ಆಡುವಾಗ ಮಾಸ್ಕ್, ಸ್ಯಾನಿಟೈಸರ್ ಬಳಕೆ ಸಾಧ್ಯತೆ ಕಡಿಮೆ ಇರುತ್ತದೆ. ಜೊತೆಗೆ ಯಾವುದೇ ರೀತಿಯ ಎಸ್ಒಪಿ ಇಲ್ಲದಿರುವುದರಿಂದ ಸದಸ್ಯರನ್ನು ನಿಯಂತ್ರಣಕ್ಕೆ ಒಳಪಡಿಸಲು ಸಾಧ್ಯವಿಲ್ಲ. ‌ಆದ್ದರಿಂದ ಕೋವಿಡ್-19 ಸೋಂಕು ಸಂಪೂರ್ಣ ನಿಯಂತ್ರಣಕ್ಕೆ ಬರುವ ತನಕ ರಿಕ್ರಿಯೇಷನ್ ಕ್ಲಬ್​​ಗಳಲ್ಲಿ ಇಸ್ಪೀಟ್ ಆಟಗಳ ಜೊತೆಗೆ ಇತರ ಯಾವುದೇ ಕಾರ್ಯಚಟುವಟಿಗಳು ನಡೆಯದಂತೆ ಕ್ರಮ ಕೈಗೊಳ್ಳಲು ಅಗತ್ಯವಿರುವ ಕಾರಣ ತಾತ್ಕಾಲಿಕವಾಗಿ ರಿಕ್ರಿಯೇಷನ್ ಕ್ಲಬ್​​ಗಳನ್ನು ಮುಚ್ಚಲು ದ.ಕ ಜಿಲ್ಲಾಧಿಕಾರಿ ಡಾ‌. ಕೆ.ವಿ.ರಾಜೇಂದ್ರ ಆದೇಶಿಸಿದ್ದಾರೆ.

- Advertisement -

Related news

error: Content is protected !!