- Advertisement -
- Advertisement -
ಬೆಂಗಳೂರು: ನಿನ್ನೆಯಷ್ಟೆ ನಡೆದ ಬಿಬಿಎಂಪಿ ಮಾಜಿ ಸದಸ್ಯೆ ರೇಖಾ ಕದಿರೇಶ್ ಭೀಕರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.
ಬಿಬಿಎಂಪಿ ಮಾಜಿ ಸದಸ್ಯೆ ರೇಖಾ ಕದಿರೇಶ್ ಹತ್ಯೆ ಪ್ರಕರಣದ ಆರೋಪಿಗಳ ಪತ್ತೆಗಾಗಿ ನಾಲ್ಕು ಪೊಲೀಸ್ ತಂಡಗಳನ್ನು ರಚಿಸಿದ್ದರು. ಕಾಟನ್ ಪೇಟೆ ಪೊಲೀಸರು ನಾಲ್ವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಆರೋಪಿಗಳು ಕೊಲೆ ಬಳಿಕ ಆಟೋದಲ್ಲಿ ಎಸ್ಕೇಪ್ ಆಗಿದ್ದರೆಂದು ತಿಳಿದುಬಂದಿದೆ. ಪ್ರಮುಖ ಆರೋಪಿಗಳಾದ ಪೀಟರ್ ಹಾಗೂ ಸೂರ್ಯನಿಗಾಗಿ ಶೋಧ ನಡೆದಿದೆ.
ಈ ಬಗ್ಗೆ ಸಿಎಂ ಯಡಿಯೂರಪ್ಪನವರು 24 ಗಂಟೆಯೊಳಗೆ ಆರೋಪಿಗಳನ್ನು ಬಂಧಿಸಿ ಕಠಿಣ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಆದೇಶ ಮಾಡಿದ್ದರು. ಇದೀಗ ನಾಲ್ವರನ್ನು ವಶಕ್ಕೆ ಪಡೆದ ಪೊಲೀಸರು 50ಕ್ಕೂ ಹೆಚ್ಚು ಜನರ ವಿಚಾರಣೆ ನಡೆಸಿದ್ದು, ಪ್ರಮುಖ ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆಂದು ತಿಳಿದುಬಂದಿದೆ.
- Advertisement -