- Advertisement -
- Advertisement -
ರಕ್ತ ಸಂಚಾರ ಸರಿಯಾದ ಕ್ರಮದಲ್ಲಿ ಆದರೆ ಎಷ್ಟೋ ಸಮಸ್ಯೆಗಳು ಪರಿಹಾರವಾಗಿಬಿಡುತ್ತವೆ. ನಿತ್ಯ ಬಳಸುವ ಯಾವುದೇ ಹೇರ್ ಆಯಿಲ್ ಬಳಸಿ ನಿಧಾನವಾಗಿ ನೆತ್ತಿಯ ಮೇಲೆ ಮಸಾಜ್ ಮಾಡುವುದರಿಂದ ಕೂದಲು ಸೊಂಪಾಗಿ ಬೆಳೆಯುತ್ತದೆ ಇದರ ಜೊತೆಗೆ ತಲೆನೋವು, ಟೆನ್ಶನ್ ಇಂತಹ ಸಮಸ್ಯೆಗಳು ಕೂಡ ಪರಿಹಾರವಾಗುತ್ತದೆ.
ಕೂದಲು ಉದುರುವುದು ಹಾಗೂ ತಲೆಹೊಟ್ಟಿನ ಸಮಸ್ಯೆಗೆ ಬೇವು ಅತ್ಯಂತ ಉತ್ತಮ ಆಯುರ್ವೇದ ಔಷಧಿ. ಇದನ್ನು ಕೂದಲ ಬುಡಕ್ಕೆ ಹಚ್ಚುವುದರಿಂದ ರಕ್ತಸಂಚಲನ ಹೆಚ್ಚುತ್ತದೆ. ಅಷ್ಟೇ ಅಲ್ಲದೆ ಬಾಲನೆರೆ, ಕೂದಲು ಉದುರಿ ತೆಳ್ಳಗಾಗುವುದನ್ನು ಇದು ತಪ್ಪಿಸುತ್ತದೆ. ನೀರಿನಲ್ಲಿ ಬೇವಿನ ಎಲೆ ಹಾಕಿ ಚೆನ್ನಾಗಿ ಕುದಿಸಿ ಅದರ ನೀರನ್ನು ಕೂದಲ ಬುಡಕ್ಕೆ ಹಚ್ಚಿ ಒಣಗಿದ ಮೇಲೆ ಸ್ನಾನ ಮಾಡುವುದರಿಂದ ಕೂದಲು ಉದುರುವುದು ನಿಲ್ಲುತ್ತದೆ. ಅಲ್ಲದೇ ಕೂದಲ ಬೆಳವಣಿಗೆಯೂ ಹೆಚ್ಚುತ್ತದೆ.
- Advertisement -