- Advertisement -
![G L Acharya G L Acharya](https://vtvvitla.com/wp-content/uploads/2023/07/gl_acharya.jpeg)
![panikkar panikkar](https://vtvvitla.com/wp-content/uploads/2020/07/panikkar.jpeg)
- Advertisement -
![](https://vtvvitla.com/wp-content/uploads/2022/01/indane-gas-2-1024x748.jpg)
![](https://vtvvitla.com/wp-content/uploads/2024/04/vigneshwara-new-683x1024.jpeg)
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ದರ್ಶನ್ ಗ್ಯಾಂಗ್ ಬಂಧನವಾದ ಬೆನ್ನಲ್ಲೇ ವಿಚಾರಣೆಗೆ ಹಾಜರಾಗುವಂತೆ ಸ್ಯಾಂಡಲ್ವುಡ್ ಖ್ಯಾತ ಹಾಸ್ಯನಟ ಚಿಕ್ಕಣ್ಣಗೆ ಪೊಲೀಸರು ನೋಟಿಸ್ ನೀಡಿದ್ದಾರೆ.
ಕೊಲೆ ನಡೆದ ಜೂನ್ 8 ಶನಿವಾರದಂದು ದರ್ಶನ್ ಮತ್ತು ಗ್ಯಾಂಗ್ ಸದಸ್ಯರು ಆರ್ಆರ್ ನಗರದ ಸ್ಟೋನಿಬ್ರೂಕ್ ಪಬ್ನಲ್ಲಿ ಮಧ್ಯಾಹ್ನದಿಂದ ಪಾರ್ಟಿ ಮಾಡಿದ್ದರು. ಈ ಪಾರ್ಟಿಯಲ್ಲಿ ಚಿಕ್ಕಣ್ಣ ಭಾಗಿಯಾಗಿದ್ದರು.
ಸಂಜೆ ವೇಳೆಗೆ ಸ್ವಲ್ಪ ಕೆಲಸವಿದೆ ಎಂದು ಹೇಳಿ ದರ್ಶನ್ ಹೊರಟಿದ್ದರು. ರೇಣುಕಾಸ್ವಾಮಿ ಕೊಲೆಯಾದ ದಿನವೇ ದರ್ಶನ್ ಜೊತೆ ಪಾರ್ಟಿ ಮಾಡಿದ್ದರಿಂದ ಪೊಲೀಸರು ಈಗ ತುರ್ತು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ನಲ್ಲಿ ಉಲ್ಲೇಖಿಸಿದ್ದಾರೆ.
ಈ ಪ್ರಕರಣದಲ್ಲಿ ನೇರವಾಗಿ ಭಾಗಿಯಾಗದ ಕಾರಣ ಚಿಕ್ಕಣ್ಣ ಅವರನ್ನು ಬಂಧನ ಮಾಡುವುದಿಲ್ಲ. ಬದಲಾಗಿ ಸಾಕ್ಷಿಯನ್ನಾಗಿ ಪರಿಗಣಿಸಲಿದ್ದಾರೆ. ಕೊಲೆಯ ಬಗ್ಗೆ ಮಾಹಿತಿ ಇಲ್ಲದೇ ಇದ್ದರೂ ಕೂಡ, ಪಾರ್ಟಿಯಲ್ಲಿದ್ದ ಎಂಬ ಕಾರಣಕ್ಕೆ ಸಾಕ್ಷಿಯಾಗಿ ಪರಿಗಣನೆ ಮಾಡಲು ಪೊಲೀಸರು ಮುಂದಾಗಿದ್ದಾರೆ.
- Advertisement -