![G L Acharya G L Acharya](https://vtvvitla.com/wp-content/uploads/2023/07/gl_acharya.jpeg)
![panikkar panikkar](https://vtvvitla.com/wp-content/uploads/2020/07/panikkar.jpeg)
![](https://vtvvitla.com/wp-content/uploads/2021/10/indane-gas-1024x606.jpg)
![](https://vtvvitla.com/wp-content/uploads/2024/04/vigneshwara-new-683x1024.jpeg)
ನಟ ದರ್ಶನ್ ಮತ್ತು ಗ್ಯಾಂಗ್ ಸೇರಿ ನಡೆಸಿದ್ದಾರೆ ಎನ್ನಲಾದ ರೇಣುಕಾ ಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರೇಣುಕಾ ಸ್ವಾಮಿಯನ್ನು ಚಿತ್ರದುರ್ಗದಿಂದ ಅಪಹರಿಸಿಕೊಂಡು ಬೆಂಗಳೂರಿಗೆ ಕರೆದುಕೊಂಡ ಬರಲಾಗಿತ್ತು. ಅಪಹರಣ ನಡೆಸಲು ರವಿಶಂಕರ್ ಎಂಬಾತನ ಕಾರನ್ನು ಬಳಸಿದ್ದರು. ಚಾಲಕ ರವಿಶಂಕರ್ 8ನೇ ಆರೋಪಿ ಆಗಿದ್ದಾನೆ.
ಚಿತ್ರದುರ್ಗದಲ್ಲಿ ಇರುವ ರವಿಶಂಕರ್ ಮನೆಯಲ್ಲಿ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಅಲ್ಲದೇ, ಆತನ ಕಾರನ್ನು ಜಪ್ತಿ ಮಾಡಲಾಗಿದೆ. ಚಿತ್ರದುರ್ಗ ತಾಲೂಕಿನ ಐನಳ್ಳಿ ಕುರುಬರಹಟ್ಟಿಯಲ್ಲಿ ರವಿಶಂಕರ್ ಮನೆ ಇದೆ. ಕೊಲೆ ನಡೆದ ಬಳಿಕ ದರ್ಶನ್ ಹಾಗೂ ಗ್ಯಾಂಗ್ನಿಂದ 5 ಲಕ್ಷ ರೂಪಾಯಿ ಪಡೆದಿದ್ದಾನೆ ಎಂಬ ಮಾಹಿತಿ ಇದೆ. ರವಿಶಂಕರ್ ಮನೆಯಲ್ಲಿ ಪೊಲೀಸರು ಹಲವು ಗಂಟೆಗಳ ಕಾಲ ಪರಿಶೀಲನೆ ನಡೆಸಿದ್ದಾರೆ. ಮನೆಯಲ್ಲಿ ವಿಚಾರಣೆ ತೀವ್ರಗೊಂಡಿದೆ. ಕಾಮಾಕ್ಷಿಪಾಳ್ಯ ಸಿಪಿಐ ಸುಬ್ರಹ್ಮಣ್ಯ ನೇತೃತ್ವದಲ್ಲಿ ವಿಚಾರಣೆ ನಡೆದಿದ್ದು, ಇದರಲ್ಲಿ ರವಿಶಂಕರ್ ಕುಟುಂಬಸ್ಥರಿಗೆ ಹಲವು ಪ್ರಶ್ನೆಗಳನ್ನು ಕೇಳಿ ಮಾಹಿತಿ ಪಡೆಯಲಾಗಿದೆ. ಜೂ.8ರಂದು ರೇಣುಕಾಸ್ವಾಮಿ ಕಿಡ್ನ್ಯಾಪ್ಗೆ ರವಿಶಂಕರ್ ಕಾರು ಬಳಕೆ ಆಗಿತ್ತು. ಜೂ.9ರಂದು ಆರೋಪಿಗಳು ಅದೇ ಕಾರಿನಲ್ಲಿ ಚಿತ್ರದುರ್ಗಕ್ಕೆ ವಾಪಸ್ ಬಂದಿದ್ದರು.