Saturday, June 28, 2025
spot_imgspot_img
spot_imgspot_img

ರೇಣುಕಾಸ್ವಾಮಿ ಕೊಲೆ ಪ್ರಕರಣ; ಮತ್ತೆ ಪರಪ್ಪನ ಅಗ್ರಹಾರಕ್ಕೆ ಆರೋಪಿ ಪ್ರದೋಷ್‌ ಸ್ಥಳಾಂತರ

- Advertisement -
- Advertisement -

ಬೆಳಗಾವಿ: ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ಚಿತ್ರನಟ ದರ್ಶನ್ ಸಹಚರ ಪ್ರದೋಷ್‌‌ನನ್ನು ಹಿಂಡಲಗಾ ಕಾರಾಗೃಹದಿಂದ ಮರಳಿ ಬೆಂಗಳೂರಿನ ಪರಪ್ಪನ ಅಗ್ರಹಾರಕ್ಕೆ ಇಂದು ಪೊಲೀಸ್ ಭದ್ರತೆಯಲ್ಲಿ ಸ್ಥಳಾಂತರಿಸಲಾಯಿತು.

ಬೆಂಗಳೂರು ಕಾರಾಗೃಹದಿಂದ ಬೆಳಗಾವಿ ಜೈಲಿಗೆ ಸ್ಥಳಾಂತರ ಮಾಡಿದ್ದರ ಬಗ್ಗೆ ಪ್ರದೋಷ್ ಸಲ್ಲಿಸಿದ್ದ ರಿಟ್ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರು ವಿಚಾರಣಾ ಕೈದಿ ಪ್ರದೋಷನನ್ನು ಮರಳಿ ಬೆಂಗಳೂರು ಕಾರಾಗೃಹಕ್ಕೆ ಸ್ಥಳಾಂತರಿಸುವಂತೆ ನಿರ್ದೇಶನ ನೀಡಿದ್ದರು. ಅದರಂತೆ ಆದೇಶ ಪ್ರತಿ ಬಂದ ಬಳಿಕ ಇಂದು ಸ್ಥಳಾಂತರಿಸಲಾಯಿತು.

44 ದಿನಗಳ ಕಾಲ ಹಿಂಡಲಗಾ ಜೈಲಿನಲ್ಲಿ ಕಾಲ ಕಳೆದ ಪ್ರದೋಷ ಬೆಂಗಳೂರಿಗೆ ಸ್ಥಳಾಂತರಗೊಂಡಿದ್ದಾನೆ.

- Advertisement -

Related news

error: Content is protected !!