ನಟ ದರ್ಶನ್ ಗ್ಯಾಂಗ್ನಿಂದ ಹತ್ಯೆಯಾದ ರೇಣುಕಾಸ್ವಾಮಿ ಪ್ರಕರಣದಲ್ಲಿ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಎಲ್ಲಾ 17 ಆರೋಪಿಗಳ ಮಾಹಿತಿಯನ್ನು ಪೊಲೀಸರು ಕಲೆ ಹಾಕಿದ್ದಾರೆ. ಈಗ ರೇಣುಕಾಸ್ವಾಮಿ ಬಗ್ಗೆ ಮಾಹಿತಿ ಕಲೆ ಹಾಕಲು ಮುಂದಾಗಿದ್ದಾರೆ. ಇದಕ್ಕಾಗಿ ಪೊಲೀಸರು ನೇರವಾಗಿ ಇನ್ಸ್ಟಾಗ್ರಾಮ್ ಸಂಸ್ಥೆಗೆ ಪತ್ರ ಬರೆಯಲು ಮುಂದಾಗಿದ್ದಾರೆ. ಸಾವನ್ನಪ್ಪಿದ ರೇಣುಕಾಸ್ವಾಮಿ ಬಗೆಗೆ ಅಚ್ಚರಿ ವಿಚಾರಗಳು ಹೊರಬರ್ತಿವೆ.
ಪ್ರಕರಣದ ಮೊದಲ ಆರೋಪಿ ಪವಿತ್ರಾ ಗೌಡಗೆ ರೇಣುಕಾಸ್ವಾಮಿ 200 ಮೆಸೇಜ್ ಕಳುಹಿಸಿದ್ದ ಎನ್ನುವುದು ತಿಳಿದುಬಂದಿದೆ. ಅದು ಕೂಡ ಇನ್ಸ್ಟಾಗ್ರಾಮ್ನಲ್ಲಿ ಅಶ್ಲೀಲ ಮೆಸೇಜ್ ಮಾಡಿದ್ದ ಎಂದು ತನಿಖೆಯಲ್ಲಿ ತಿಳಿದುಬಂದಿದೆ. ಆತನ ಕಾಟ ಅತಿಯಾದಾಗ ಈ ವಿಚಾರವನ್ನು ಪವಿತ್ರಾ ಪವನ್ಗೆ ತಿಳಿಸಿದ್ದಳು. ಈ ಎಲ್ಲಾ ವಿಚಾರಗಳನ್ನು ಪವಿತ್ರಾ ಪೊಲೀಸರ ಮುಂದೆ ಹೇಳಿಕೊಂಡಿದ್ದಾಳೆ.
ಇನ್ನು ರೇಣುಕಾಸ್ವಾಮಿ ಕಳಿಸಿದ ಮೆಸೇಜ್ಗಳ ಮಾಹಿತಿ ಕಲೆ ಹಾಕಲು ಪೊಲೀಸರು ಮುಂದಾಗಿದ್ದಾರೆ. ಇನ್ಸ್ಟಾಗ್ರಾಮ್ ಸಂಸ್ಥೆಗೆ ಪತ್ರ ಬರೆಯಲು ನಿರ್ಧರಿಸಿದ್ದಾರೆ.
ತನ್ನ ಇನ್ಸ್ಟಾಗ್ರಾಮ್ ಐಡಿಯಿಂದ ಪವಿತ್ರಾಗೌಡಗೆ ರೇಣುಕಾಸ್ವಾಮಿ ಅಶ್ಲೀಲ ಮೆಸೇಜ್ ಮಾಡಿದ್ದ, ಆತ ಮಾಡಿರುವ ಚಾಟ್ ಡೇಟಾವನ್ನ ರಿಟ್ರೀವ್ ಮಾಡಬೇಕಿದೆ. ಹೀಗಾಗಿ ರೇಣುಕಾಸ್ವಾಮಿ ಬಳಸುತ್ತಿದ್ದ ಇನ್ಸ್ಟಾಗ್ರಾಮ್ ಸಂದೇಶದ ಬಗ್ಗೆ ಮಾಹಿತಿ ಕೊಡಲು ಪೊಲೀಸರು ಮನವಿ ಮಾಡಲಿದ್ದಾರೆ. ಯಾರಿಗೆ ರೇಣುಕಾಸ್ವಾಮಿ ಮೆಸೇಜ್ ಮಾಡಿದ್ದ. ಆತನ ಇನ್ಸ್ಟಾಗ್ರಾಂ ಖಾತೆಯಿಂದ ಸೆಂಡ್ ಆಗಿರುವ ಎಲ್ಲಾ ಮೆಸೇಜ್ಗಳ ಮಾಹಿತಿ ಬೇಕು ಅಂತ ಕೇಳಲಿದ್ದಾರೆ. ಹಾಗಾಗಿ ಆತನ ಖಾತೆಯ ಸಂಪೂರ್ಣ ಮಾಹಿತಿಯನ್ನ ಪೊಲೀಸರು ಕೇಳಿದ್ದಾರೆ. ಇದರ ಜೊತೆಗೆ ಇನ್ನೂ ಬೇರೆ ಯಾರಿಗಾದರೂಮೆಸೇಜ್ ಮಾಡಿದ್ನಾ ಎನ್ನುವ ಬಗ್ಗೆ ಮಾಹಿತಿ ಕಲೆ ಹಾಕಲಿದ್ದಾರೆ.
ಇನ್ನು ರೇಣುಕಾಸ್ವಾಮಿ ಮೊಬೈಲ್ನಿಂದ ಮೆಸೇಜ್ಗಳ ಮಾಹಿತಿ ಪಡೆಯೋಣ ಎಂದರೂ ಆತನ ಮೊಬೈಲ್ನ್ನು ಆರೋಪಿಗಳು ನಾಶ ಮಾಡಿದ್ದಾರೆ. ಹೀಗಾಗಿ ಇನ್ಸ್ಟಾಗ್ರಾಂ ಚಾಟ್ ಡೇಟಾವನ್ನು ರಿಟ್ರೀವ್ ಮಾಡಲು ಸಿದ್ಧತೆ ನಡೆಸಿದ್ದು ಇದಕ್ಕಾಗಿ ಇನ್ಸ್ಟಾಗ್ರಾಂ ಸಂಸ್ಥೆಗೆ ಮನವಿ ಮಾಡಲಿದ್ದಾರೆ ಎಂದು ವರದಿಯಾಗಿದೆ.