Friday, June 27, 2025
spot_imgspot_img
spot_imgspot_img

ರೇಣುಕಾಸ್ವಾಮಿ ಕೊಲೆ ಕೇಸ್‌ : ಪವಿತ್ರಾ ಗೌಡ A-1 , ನಟ ದರ್ಶನ್ A- 2 ಆರೋಪಿ..!

- Advertisement -
- Advertisement -

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ 13 ಮಂದಿ ಆರೋಪಿಗಳನ್ನು ಬಂಧಿಸಲಾಗಿದ್ದು, ಪವಿತ್ರಾ ಗೌಡ ಎ 1 ಆರೋಪಿ, ದರ್ಶನ್ ಎ 2 ಆರೋಪಿ , ಕೆ.ಪವನ್ ಎ-3 ಆರೋಪಿ ಎಂದು ಎಫ್ ಐ ಆರ್ ನಲ್ಲಿ ಹೆಸರಿಸಲಾಗಿದೆ.

ಬೌರಿಂಗ್​ ಆಸ್ಪತ್ರೆಯಲ್ಲಿ ಎಲ್ಲ 13 ಆರೋಪಿಗಳ ವೈದ್ಯಕೀಯ ಪರೀಕ್ಷೆ ಮಾಡಿಸಲಾಗಿದೆ. ಒಟ್ಟು 13 ಜನರನ್ನು ಇಂದು (ಜೂನ್​ 11)  ಬೆಂಗಳೂರಿನ ಮ್ಯಾಜಿಸ್ಟ್ರೇಟ್‌ ಕೋರ್ಟ್‌ ಎದುರು ಹಾಜರುಪಡಿಸಲಾಗಿದೆ. ಹೆಚ್ಚಿನ ತನಿಖೆಗಾಗಿ ವಾದ ವಿವಾದ ಆಲಿಸಿ ಆರೋಪಿಗಳಿಗೆ 6 ದಿನ ಪೊಲೀಸ್ ಕಸ್ಟಡಿ ನೀಡಲಾಗಿದೆ.

ಎಸಿಎಂಎಂ ನ್ಯಾಯಾಲಯದ ಬಳಿ ಬಿಗಿ ಪೊಲೀಸ್ (Police) ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿತ್ತು. ನ್ಯಾಯಾಲಯದ ಎರಡೂ ಗೇಟ್ ನಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಿ ಭಧ್ರತೆ ಒದಗಿಸಲಾಗಿದೆ. ಭದ್ರತೆಗಾಗಿ (Security) 50 ಕ್ಕೂ ಅಧಿಕ ಪೊಲೀಸರ ನಿಯೋಜನೆ ಮಾಡಲಾಗಿದೆ. ಹಲಸೂರು ಗೇಟ್ ಎಸಿಪಿ ಶಿವಾನಂದ್ ನೇತೃತ್ವದಲ್ಲಿ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ.

ತನಿಖೆಯಿಂದ ಶಾಕಿಂಗ್​ ವಿಚಾರಗಳು ಹೊರಬರುತ್ತಿವೆ. ದರ್ಶನ್​, ಪವಿತ್ರಾ ಗೌಡ ಹಾಗೂ ಅವರ ಸಹಚರರ ವಿರುದ್ಧ ಅನೇಕ ಸಾಕ್ಷಿಗಳು ಸಿಗುತ್ತಿವೆ. ಕೊಲೆ ನಡೆದ ಶೆಡ್​ಗೆ ಅದೇ ರಾತ್ರಿ ದರ್ಶನ್​ ಕಾರು ಬಂದಿತ್ತು ಎಂಬುದಕ್ಕೆ ಸಿಸಿಟಿವಿ ದೃಶ್ಯಗಳು ಲಭ್ಯವಾಗಿವೆ.

ಈ ಮೂಲಕ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಅವರ ಪಾತ್ರ ಇರುವುದು ಸ್ಪಷ್ಟವಾಗಿದೆ ಎನ್ನಲಾಗಿದೆ.

ಚಿತ್ರದುರ್ಗದ ರೇಣುಕಾ ಸ್ವಾಮಿ ( ಕೊಲೆಯಾದ ವ್ಯಕ್ತಿ) ದರ್ಶನ್ ಗೆಳತಿ ಪವಿತ್ರಾ ಗೌಡಗೆ ಅಶ್ಲೀಲ ಸಂದೇಶ, ಫೋಟೋ ಕಳುಹಿಸಿದ್ದನು ಎನ್ನಲಾಗಿದೆ. ಪವಿತ್ರ ಗೌಡ ಕೂಡ ಈ ವಿಚಾರವನ್ನು ದರ್ಶನ್ ಗಮನಕ್ಕೆ ತಂದಿದ್ದರು ಎನ್ನಲಾಗಿದೆ. ನಂತರ ಯಾರೋ ಒಬ್ಬರು ಚಿತ್ರದುರ್ಗದ ದರ್ಶನ್ ಅಭಿಮಾನಿಗಳ ಸಂಘದ ರಾಘವೇಂದ್ರ ಎಂಬುವವರಿಗೆ ಕರೆ ಮಾಡಿ ಈ ವಿಚಾರ ತಿಳಿಸಿದ್ದಾರೆ. ನಂತರ ಚಿತ್ರದುರ್ಗದ ರೇಣುಕಾ ಸ್ವಾಮಿಯನ್ನು ಬೆಂಗಳೂರಿಗೆ ಕರೆಸಿಕೊಂಡು ಕಾರ್ ಶೆಡ್ ಒಂದರಲ್ಲಿ ಹಲ್ಲೆ ನಡೆಸಲಾಗಿದೆ. ನಾಲ್ಕು ಮಂದಿ ರೇಣುಕಾ ಸ್ವಾಮಿಗೆ ಹಲ್ಲೆ ಮಾಡಿದ್ದು, ಈ ವೇಳೆ ನಟ ದರ್ಶನ್ ಕೂಡ ಸ್ಥಳದಲ್ಲಿದ್ದರು ಎನ್ನಲಾಗಿದೆ. ಅವರ ಸೂಚನೆ ಮೇರೆಗೆ ರೇಣುಕಾ ಸ್ವಾಮಿಯನ್ನು ಕೊಲೆ ಮಾಡಿರುವುದಾಗಿ ಆರೋಪಿಗಳು ತಪ್ಪೊಪ್ಪಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ದರ್ಶನ್, ಪವಿತ್ರಾ ಗೌಡ ಅವರ ಜೊತೆ ಪವನ್, ವಿನಯ್, ಪ್ರದೋಷ್, ನಂದೀಶ, ದೀಪಕ್, ಲಕ್ಷ್ಮಣ್, ನಾಗರಾಜು, ಕಾರ್ತಿಕ್, ನಿಖಿಲ್, ಕೇಶವಮೂರ್ತಿ,ರಾಘವೇಂದ್ರ ಅವರನ್ನು ಅರೆಸ್ಟ್ ಮಾಡಲಾಗಿದೆ.

- Advertisement -

Related news

error: Content is protected !!