Sunday, June 29, 2025
spot_imgspot_img
spot_imgspot_img

ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೆ ವಿಚಾರಣೆಗೆ ಹಾಜರಾದ ಚಿಕ್ಕಣ್ಣ..!

- Advertisement -
- Advertisement -

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಟ ಚಿಕ್ಕಣ್ಣ ಇಂದು ಬಸವೇಶ್ವರನಗರದಲ್ಲಿರುವ ಎಸಿಪಿ ಕಚೇರಿಗೆ ಎರಡನೇ ಬಾರಿ ವಿಚಾರಣೆಗೆ ಹಾಜರಾಗಿದ್ದಾರೆ. ಆರೋಪಿ ದರ್ಶನ್ ಭೇಟಿಗೆ ಪರಪ್ಪನ ಅಗ್ರಹಾರ ಜೈಲಿಗೆ ಹೋಗಿದ್ದಕ್ಕೆ ಮತ್ತೆ ವಿಚಾರಣೆಗೆ ಕರೆಯಲಾಗಿದೆ.

ಇನ್ನು ಈ ಕುರಿತು ವಿಚಾರಣೆಯ ಬಳಿಕ ಚಿಕ್ಕಣ್ಣ ಮಾತನಾಡಿ, ನಾನು ಒಬ್ಬ ಸಾಕ್ಷಿದಾರನಾಗಿದ್ದುಕೊಂಡು ಹೋಗಿ ದರ್ಶನ್‌ರನ್ನು ಮಾತನಾಡಿಸಬಾರದು ಅನ್ನೋದು ನನಗೆ ಗೊತ್ತಿರಲಿಲ್ಲ. ಹಾಗಾಗಿ ನಾನು ಪರಪ್ಪನ ಅಗ್ರಹಾರಕ್ಕೆ ಹೋಗಿ ದರ್ಶನ್ ಭೇಟಿ ಮಾಡಿ ಬಂದಿದ್ದೆ. ಹಾಗಾಗಿ ವಿಚಾರಣೆಗೆ ಬರುವಂತೆ ನಿನ್ನೆ ನೋಟಿಸ್ ಕೊಟ್ಟಿದ್ದರು. 9 ಗಂಟೆಗೆ ವಿಚಾರಣೆಗೆ ಹಾಜರಾಗುವಂತೆ ಸೂಚನೆ ಕೊಡಲಾಗಿತ್ತು. ಹಾಗಾಗಿ ಇಂದು ವಿಚಾರಣೆಗೆ ಹಾಜರಾಗಿದ್ದೇನೆ ಎಂದರು.

ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಕೇಸ್‌ ಸಂಬಂಧಿಸಿದಂತೆ ಆರೋಪಿಗಳಾದ ದರ್ಶನ್ ಮತ್ತು ಗ್ಯಾಂಗ್‌ಗೆ ಸೆಪ್ಟೆಂಬರ್ 9ವರೆಗೆ ನ್ಯಾಯಾಂಗ ಬಂಧನ ವಿಸ್ತರಿಸಿ 24ನೇ ಎಸಿಎಂಎಂ ನ್ಯಾಯಾಲಯ ಗುರುವಾರ ಆದೇಶ ಪ್ರಕಟಿಸಿತ್ತು. ಈ ಆದೇಶದ ನಂತರ ದರ್ಶನ್ ಅವರನ್ನು ಇಂದು ಬೆಳಗ್ಗೆ ಪರಪ್ಪನ ಅಗ್ರಹಾರದಿಂದ ಪೊಲೀಸ್‌ ವಾಹನದಲ್ಲಿ ಬಳ್ಳಾರಿ ಜೈಲಿಗೆ ಶಿಫ್ಟ್‌ ಮಾಡಿದ್ದಾರೆ.

- Advertisement -

Related news

error: Content is protected !!