- Advertisement -
- Advertisement -


ಬೆಂಗಳೂರು (ಏ.11): ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಚರ್ಚೆಯಲ್ಲಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ವರದಿ ಶುಕ್ರವಾರದ ಸಚಿವ ಸಂಪುಟ ಸಭೆಯಲ್ಲಿ ಮಂಡನೆಯಾಗಲಿದ್ದು, ವರದಿಗೆ ಬಹುತೇಕ ಅನುಮೋದನೆ ದೊರೆಯುವ ಸಾಧ್ಯತೆಗಳಿವೆ.
ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಬರೋಬ್ಬರಿ 169 ಕೋಟಿ ರು. ವೆಚ್ಚದಲ್ಲಿ ಸಿದ್ಧಪಡಿಸಿರುವ ವರದಿಯನ್ನು ಸಚಿವ ಸಂಪುಟದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಲಿದ್ದು, ವರದಿಯಲ್ಲಿನ ಅಂಶಗಳ ಬಗ್ಗೆ ಸದಸ್ಯರೊಂದಿಗೆ ಚರ್ಚಿಸಲಿದ್ದಾರೆ.
- Advertisement -








