Saturday, June 28, 2025
spot_imgspot_img
spot_imgspot_img

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ತಲೆಮರೆಸಿಕೊಂಡಿರುವ ಪಡಂಗಡಿಯ ನೌಷಾದ್ ಸುಳಿವು ನೀಡಿದವರಿಗೆ ಬಹುಮಾನ- ಎನ್.ಐ.ಎ.ಘೋಷಣೆ

- Advertisement -
- Advertisement -

ಪುತ್ತೂರು : ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ಐಎ ತನಿಖೆಯನ್ನು ತೀವ್ರಗೊಳಿಸಿದ್ದು, ಇಇದೀಗ ಆರೋಪಿ ಸುಳಿವು ನೀಡಿದವರಿಗೆ ಎರಡು ಲಕ್ಷ ರೂಪಾಯಿ ಘೋಷಣೆ ಮಾಡಿ ಬೆಂಗಳೂರು ಎನ್.ಐ.ಎ. ಸಾರ್ವಜನಿಕ ಪ್ರಕಟಣೆ ಹೊರಡಿಸಿದೆ.

2022 ಜುಲೈ 26ರಂದು ಹತ್ಯೆಯಾದ ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಆರೋಪಿ ನಂಬರ್ 23 ಆಗಿರುವ ಬೆಳ್ತಂಗಡಿ ತಾಲೂಕಿನ ಪಡಂಗಡಿ ಗ್ರಾಮದ ಪೊಯ್ಯಗುಡ್ಡ ನಿವಾಸಿ ನೌಷದ್(32) ಎಂಬಾತ ಕೊಲೆ ಮಾಡಿದ ಆರೋಪಿಗಳು ಪರಾರಿಯಾಗಲು ಸಹಕರಿಸಿದ ಹಿನ್ನೆಲೆಯಲ್ಲಿ ಎನ್.ಐ.ಎ ಅಧಿಕಾರಿಗಳು ಈ ಮೊದಲೇ ಪಡಂಗಡಿಯಲ್ಲಿರುವ ಮನೆಗೆ ದಾಳಿ ಮಾಡಿದ್ದರು.ಈ ವೇಳೆ ನೌಷದ್ ಪ್ರಕರಣ ನಡೆದ ಬಳಿಕ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿತ್ತು.ಎನ್.ಐ.ಎ ಅಧಿಕಾರಿಗಳು ನೋಟಿಸ್ ನೀಡಿ ಹೋಗಿದ್ದರು.

ಇದೀಗ ಬೆಂಗಳೂರು ಎನ್.ಐ.ಎ ಅಧಿಕಾರಿಗಳು ನೌಷದ್ ಬಗ್ಗೆ ಎನ್.ಐ.ಎ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಲ್ಲಿ ಮಾಹಿತಿ ಗೌಪ್ಯವಾಗಿಟ್ಟು ಆ ವ್ಯಕ್ತಿಗೆ ಎರಡು ಲಕ್ಷ ರೂಪಾಯಿ ಬಹುಮಾನ ನೀಡುವುದಾಗಿ ಘೋಷಣೆ ಮಾಡಿರುವುದಾಗಿ ಎನ್.ಐ.ಎ ಪತ್ರಿಕಾ ಪ್ರಕಟಣೆ ಹೊರಡಿಸಿದ್ದಾರೆ.

- Advertisement -

Related news

error: Content is protected !!