- Advertisement -
- Advertisement -




ವಿಟ್ಲ : ನಿನ್ನೆ ಸಂಜೆ ಸಾರಡ್ಕ ಸಮೀಪ ಬೈಕ್ ಮತ್ತು ಕಾರು ನಡುವೆ ರಸ್ತೆ ಅಪಘಾತ ಒಂದು ಸಂಭವಿಸಿದ್ದು, ಬೈಕ್ ಸವಾರರು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾದ ಘಟನೆ ವರದಿಯಾಗಿದೆ.
ಪ್ರತಿಷ್ಠಿತ ಖಾಸಗಿ ವಾಹಿನಿಯೊಂದರ ಸಿಬ್ಬಂದಿಗಳು ಬೈಕ್ ನಲ್ಲಿ ಕಾಸರಗೋಡಿಗೆ ತೆರಳುತ್ತಿದ್ದು, ವಿರುದ್ಧ ಧಿಕ್ಕಿನಿಂದ ಬಂದ ಕಾರೊಂದು ಗುದ್ದಿದ ಪರಿಣಾವ ಘಟನೆ ಸಂಭವಿಸಿದೆ ಎನ್ನಲಾಗಿದೆ.
ಮಠಯೊಂದರ ಕಾರ್ಯಕ್ರಮದ ನೇರಪ್ರಸಾರಕ್ಕೆ ವಾಹಿನಿಯ ಸಿಬ್ಬಂದಿಗಳು ತೆರಳುತ್ತಿದ್ದರು ಎಂದು ತಿಳಿದುಬಂದಿದೆ. ಕಾರಿನ ಚಾಲಕನ ಅಜಾಗರೂಕತೆಯಿಂದ ಘಟನೆ ನಡೆದಿದ್ದು, ಕಾರು ಸರಕಾರಿ ಶಾಲೆಯೊಂದರ ಉಪನ್ಯಾಸರಿಗೆ ಸೇರಿದ್ದಾಗಿದೆ. ಸ್ಥಳಕ್ಕೆ ವಿಟ್ಲ ಠಾಣಾ ಪೋಲಿಸರು ಆಗಮಿಸಿದ್ದು, ಮಾತುಕತೆ ಮೂಲಕ ಬಗೆಹರಿಸಿದ್ದು, ರಾಜಿಯಲ್ಲಿ ಇತ್ಯರ್ಥ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.
- Advertisement -