Sunday, June 29, 2025
spot_imgspot_img
spot_imgspot_img

ಬೆಳ್ತಂಗಡಿ: ಮನೆಯಲ್ಲಿ ಯಾರೂ ಇಲ್ಲದ ವೇಳೆ ನಗ-ನಗದು ಕಳವು

- Advertisement -
- Advertisement -

ಬೆಳ್ತಂಗಡಿ: ಮನೆಯಲ್ಲಿ ಯಾರೂ ಇಲ್ಲದ ವೇಳೆ ಕಳ್ಳರು ಚಿನ್ನಾಭರಣ ಕಳವುಗೈದ ಘಟನೆ ಬೆಳ್ತಂಗಡಿ ಅಂಡಿಂಜೆ ಗ್ರಾಮದಲ್ಲಿ ನಡೆದಿದೆ.

ದಿನಾಂಕ 27-10-2024 ರಂದು ಸಂಜೆಯಿಂದ ದಿನಾಂಕ: 28-10-2024 ರ ಮದ್ಯಾಹ್ನದ ಅವಧಿಯಲ್ಲಿ ಅಂಡಿಂಜೆ ನಿವಾಸಿ ಸುಜಾತ ತನ್ನ ಮನೆಗೆ ಬೀಗ ಹಾಕಿ ತವರು ಮನೆಯಾದ ಅಳಿಯೂರು ಎಂಬಲ್ಲಿಗೆ ಹೋಗಿದ್ದಾಗ ಯಾರೋ ಕಳ್ಳರು ಮನೆಯ ಬಾಗಿಲಿನ ಬೀಗವನ್ನು ಮುರಿದು ಒಳಪ್ರವೇಶಿಸಿ ಮನೆಯ ಗೋದ್ರೇಜ್‌ ಕಪಾಟಿನಲ್ಲಿದ್ದ ನಗದು ಹಣ ರೂ25,000/- ಹಾಗೂ 09 ಗ್ರಾಂ ತೂಕದ ಚಿನ್ನಾಭರಣಗಳನ್ನು ಕಳವು ಮಾಡಿಕೊಂಡು ಹೋಗಿದ್ದು, ಕಳುವಾದ ಸೊತ್ತುಗಳ ನಗದು ಸೇರಿ ಒಟ್ಟು ಅಂದಾಜು ಮೌಲ್ಯ 80,000/ ರೂ ಆಗಬಹುದಾಗಿ ನೀಡಿದ ದೂರಿನ ಮೇರೆಗೆ ವೇಣೂರು ಪೊಲೀಸ್ ಠಾಣಾ ಅ.ಕ್ರ 81/2024 ಕಲಂ 331(3),331(4),305 BNS-2023 ರಂತೆ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!