- Advertisement -
- Advertisement -
ಕಡಬ : ಮನೆಯೊಂದಕ್ಕೆ ನುಗ್ಗಿದ ಕಳ್ಳರು ಸುಮಾರು 6 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಮತ್ತು 42 ಸಾವಿರ ನಗದು ದೋಚಿರುವ ಘಟನೆ ಕಡಬ ತಾಲೂಕಿನ ಕೊಯಿಲ ಗ್ರಾಮದ ಗಂಡಿಬಾಗಿಲು ಎಂಬಲ್ಲಿ ನಡೆದಿದೆ.
ಗಂಡಿಬಾಗಿಲು ಮಸೀದಿ ಬಳಿಯ ನಿವಾಸಿ ಅಬೂಬಕ್ಕರ್ ಎಂಬವರ ಮನೆಯಲ್ಲಿ ಈ ಕೃತ್ಯ ನಡೆದಿದ್ದು, ಗುರುವಾರ ರಾತ್ರಿ ಆತೂರು ಮಸೀದಿಯಲ್ಲಿ ಕಾರ್ಯಕ್ರಮ ಇದ್ದುದರಿಂದ ಮನೆಯವರು ಸಂಜೆ 7 ಗಂಟೆಯ ಹೊತ್ತಿಗೆ ಮನೆಗೆ ಬೀಗ ಹಾಕಿ ತೆರಳಿದ್ದರು. ಬಳಿಕ ರಾತ್ರಿ 11 ಗಂಟೆಯ ಹೊತ್ತಿಗೆ ಮರಳಿ ಮನೆಗೆ ಬಂದು ನೋಡಿದಾಗ ಕಪಾಟಿನಲ್ಲಿದ್ದ 14 ಪವನ್ ಚಿನ್ನಾಭರಣ ಮತ್ತು ನಗದು ದೋಚಿರುವ ಘಟನೆ ಬೆಳಕಿಗೆ ಬಂದಿದೆ. ಘಟನಾ ಸ್ಥಳಕ್ಕೆ ಡಿವೈಎಸ್ಪಿ ಗಾನಾ ಟಿ ಕುಮಾರ್ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
- Advertisement -