ಬೆಂಗಳೂರು : ಜೈಲಿನ ಶೌಚಾಲಯದಲ್ಲಿ ಶೂ ಲೇಸ್ನಿಂದ ನೇಣು ಬಿಗಿದುಕೊಂಡು ರೌಡಿ ಶೀಟರ್ ಸಾವನ್ನಪ್ಪಿರುವ ಘಟನೆ ನಡೆದಿದೆ.
ಸುನೀಲ್ ಮೃತ ರೌಡಿ ಶೀಟರ್. ಹೌದು ಶೂ ಲೇಸ್ನಿಂದ ನೇಣು ಬಿಗಿದುಕೊಂಡು ಸಾವನಪ್ಪಿದ ರೀತಿಯಲ್ಲಿ ಆತನ ಶವ ಪತ್ತೆಯಾಗಿದೆ. ಕಳೆದ ಮೂರು ವರ್ಷಗಳಿಂದ ಜೈಲಿನಲ್ಲಿದ್ದ ಆತ. ಇನ್ನು ಹತ್ತು ದಿನಗಳಲ್ಲಿ ಅಂದರೆ ಜೂನ್.2 ಕ್ಕೆ ಜೈಲಿನಿಂದ ಜಾಮೀನಿನ ಮೇಲೆ ಬಿಡುಗಡೆ ಆಗಬೇಕಿದ್ದ. ಇನ್ನು ಈ ರೌಡಿಶೀಟರ್ ಸುನೀಲ್ ‘ಕಗ್ಗಲಿಪುರದಲ್ಲಿ ವಿನೋದ್ ಎಂಬಾತನನ್ನ ಕೊಲೆ ಮಾಡಿ ಜೈಲು ಸೇರಿದ್ದ.
ಕೊಲೆ ಮಾಡಿ ಜೈಲು ಸೇರಿದ್ದ ಸುನೀಲ್ ‘ಕೆಲ ದಿನಗಳ ಹಿಂದೆ ತನ್ನನ್ನು ಕೊಲೆ ಮಾಡಲು ಸ್ಕೆಚ್ ಹಾಕಲಾಗಿದೆ ಅಥವಾ ಬಾತ್ರೂಮ್ನಲ್ಲಿ ನಾನೇ ನೇಣುಹಾಕಿಕೊಂಡ ರೀತಿ ನಿಮಗೆ ಸಿಗಬಹುದು ಎಂದು ಸಹ ಹೆಳಿಕೊಂಡಿದ್ದ. ಈ ಹಿಂದೆ ಕೊಲೆಯಾಗಿದ್ದ ವಿನೋದ್ ಮಾಜಿ ಕಾರ್ಪೊರೇಟರ್ ಓರ್ವರ ಅಣ್ಣನ ಮಗನಾಗಿದ್ದ. ರೌಡಿಶೀಟರ್ ಸಾವಿನ ಬಗ್ಗೆ ಅನುಮಾನ ವ್ಯಕ್ತವಾಗಿದೆ. ಇನ್ನು ಘಟನೆ ಸಂಬಂಧ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು, ತನಿಖೆ ಶುರು ಮಾಡಿದ್ದಾರೆ. ಆ ಬಳಿಕವೇ ಸಾವಿಗೆ ನಿಜವಾದ ಕಾರಣ ತಿಳಿದು ಬರಬೇಕಿದೆ.