Sunday, August 9, 2026
spot_imgspot_img
spot_imgspot_img

ಶಬರಿಮಲೆಯಲ್ಲಿ ಮಲಯಾಳಂ ನಟ ದಿಲೀಪ್‌ಗೆ ವಿಶೇಷ ಸೌಲಭ್ಯ

- Advertisement -
- Advertisement -

ಕೊಚ್ಚಿ : ಶಬರಿಮಲೆಯಲ್ಲಿ ಮಲಯಾಳಂ ನಟ ದಿಲೀಪ್‌ಗೆ ವಿಶೇಷ ಸೌಲಭ್ಯಕ್ಕೆ ಒದಗಿಸಿರುವ ವಿಚಾರ ಬೆಳಕಿಗೆ ಬಂದಿದ್ದು, ಇದಕ್ಕೆ ಆಕ್ರೋಶ ವ್ಯಕ್ತಪಡಿಸಿರುವ ಕೇರಳ ಹೈಕೋರ್ಟ್ ಪೊಲೀಸ್ ಇಲಾಖೆ ಮತ್ತು ತಿರುವಾಂಕೂರು ದೇವಸ್ವಂ ಬೋರ್ಡನ್ನು ತೀಕ್ಷ್ಮವಾಗಿ ತರಾಟೆಗೆ ತೆಗೆದುಕೊಂಡಿದೆ.ನ್ಯಾ.ಅನಿಲ್ ಕೆ. ನರೇಂದ್ರನ್ ಮತ್ತು ನ್ಯಾ.ಮುರಳಿ ಕೃಷ್ಣ ಎಸ್. ಅವರಿಂದ ದ್ವಿಸದಸ್ಯ ಪೀಠ, ನಟನಿಗೆ ಯಾವ ಆಧಾರದ ಮೇಲೆ ವಿಶೇಷ ದರ್ಶನ ಅವಕಾಶ ನೀಡಲಾಯಿತು ಎಂದು ಪ್ರಶ್ನಿಸಿದೆ. ದಿಲೀಪ್ ದರ್ಶನ ಪಡೆದ ದಿನದ ಸಿಸಿಟಿವಿ ದೃಶ್ಯಾವಳಿಯನ್ನು ನ್ಯಾಯಾಲಯಕ್ಕೆ ಒಪ್ಪಿಸಬೇಕು ಎಂದು ಪೊಲೀಸರಿಗೆ ಆದೇಶಿಸಿದೆ.ನಟನಿಗೆ ವಿಶೇಷ ಸೌಲಭ್ಯ ನೀಡಿರುವುದರಿಂದ ಬೇರೆ ಭಕ್ತರಿಗೆ ದರ್ಶನಕ್ಕೆ ಅಡ್ಡಿಯಾಗುವುದಿಲ್ಲವೇ? ಭಕ್ತರ ಸಾಲಿನಲ್ಲಿ ಮಕ್ಕಳು ಮತ್ತು ವೃದ್ಧರು ಇರುತ್ತಾರೆ. ಅವರು ಗಂಟೆಗಟ್ಟಲೆ ಸರದಿ ಸಾಲಿನಲ್ಲಿ ನಿಲ್ಲಲ್ಲು ಸಾಧ್ಯವೇ? ಅನೇಕರು ದರ್ಶನ ಪಡೆಯದೆ ಹಾಗೆಯೇ ತೆರಳಿದ್ದಾರೆ.ಅವರೆಲ್ಲ ಯಾರ ಬಳಿ ದೂರು ಸಲ್ಲಿಸಬೇಕು ಎಂದು ಹೈಕೋರ್ಟ್ ಚಾಟಿ ಬೀಸಿದೆ.ನ್ಯಾಯಾಲಯದ ಆದೇಶದಂತೆ ಸಾಂವಿಧಾನಿಕ ಅಧಿಕಾರ ಹೊಂದಿರುವವರು ಮಾತ್ರ ಈ ರೀತಿಯ ವಿಶೇಷ ಸವಲತ್ತುಗಳನ್ನು ಶಬರಿಮಲೆಯಲ್ಲಿ ಪಡೆಯಬಹುದು.ಡಿ.5ರಂದು ನಟ ದಿಲೀಪ್‌ಗೆ ನೀಡಿದ ವಿಶೇಷ ದರ್ಶನದಿಂದ ಕಾನೂನು ಉಲ್ಲಂಘನೆ ಆಗಿದೆ ಎಂದು ಅಭಿಪ್ರಾಯಪಟ್ಟಿದೆ.ಶಬರಿಮಲೆ ಅಯ್ಯಪ್ಪ ದೇಗುಲದಲ್ಲಿ ದೇವರ ದರ್ಶನಕ್ಕಾಗಿ ಡಿ.5ರಂದು ಹಲವು ಗಂಟೆಗಳ ಕಾಲ ಸಾವಿರಾರು ಭಕ್ತರು ಸರದಿ ಸಾಲಿನಲ್ಲಿ ಕಾಯುತ್ತಿದ್ದರು. ಈ ವೇಳೆ ಸೇರಿದ್ದ ಭಕ್ತರನ್ನು ತಡೆದು ದಿಲೀಪ್‌ಗೆ ವಿಶೇಷ ಪೂಜೆ ಸಲ್ಲಿಸಲು ದೇವಸ್ಥಾನದ ಆಡಳಿತ ಮಂಡಳಿ ಅವಕಾಶ ನೀಡಿದ್ದು ಭಾರಿ ಚರ್ಚೆಗೆ ಗ್ರಾಸವಾಗಿತ್ತು.ಸುದ್ದಿಯೊಂದನ್ನು ಆಧರಿಸಿ ಹೈಕೋರ್ಟ್, ಸ್ವಯಂ ಪ್ರೇರಿತವಾಗಿ ಈ ಪ್ರಕರಣವನ್ನು ಕೈಗೆತ್ತಿಕೊಂಡು ಸರ್ಕಾರಕ್ಕೆ ಚಾಟಿ ಬೀಸಿದೆ.

- Advertisement -

Related news

error: Content is protected !!