Saturday, June 28, 2025
spot_imgspot_img
spot_imgspot_img

ಸಕಲೇಶಪುರ: ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿ ಬಿದ್ದ ಲಾರಿ..!

- Advertisement -
- Advertisement -

ಸಕಲೇಶಪುರ: ಸರಕು ತುಂಬಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ ಚಾಲಕ ಸಹಿತ ಮೂವರು ಗಾಯಗೊಂಡ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಘಾಟ್ ರಸ್ತೆಯಲ್ಲಿ ನಡೆದಿದೆ.

ಗಾಯಗಗೊಂಡವರನ್ನು ಚಾಲಕ ಜಾಫರ್, ಸಿಮ್ರಾನ್ ಮತ್ತು ಅಥಾವುಲ್ಲ ಎಂದು ಗುರುತಿಸಲಾಗಿದೆ.

ಕೆಲ ದಿನಗಳ ಹಿಂದೆ ಸುರಿದ ಭಾರೀ ಮಳೆಯಿಂದ ರಸ್ತೆಯ ಪಕ್ಕದಲ್ಲೇ ರಭಸವಾಗಿ ನೀರು ಹರಿದು ದೊಡ್ಡ ಗುಂಡಿ ಸೃಷ್ಟಿಯಾಗಿತ್ತು. ತಡರಾತ್ರಿ ತಿರುವಿನಲ್ಲಿ ಲಾರಿ, ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಲಾರಿ ಪಲ್ಟಿಯಾಗಿದೆದೆ. ಘಟನೆಯ ಪರಿಣಾಮ ಚಾಲಕ ಸಹಿತ ಮೂವರು ಗಾಯಗೊಂಡಿದ್ದಾರೆ.

ಮಾಹಿತಿ ತಿಳಿದು ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಲಾರಿಯಲ್ಲಿ ಸಿಲುಕಿಕೊಂಡಿದ್ದ ಕುಣಿಗಲ್ ಮೂಲದ ಲಾರಿ ಚಾಲಕ ಜಾಫರ್, ಸಿಮ್ರಾನ್ ಮತ್ತು ಅಥಾವುಲ್ಲರನ್ನು ರಕ್ಷಿಸಿದ್ದಾರೆ. ಗಾಯಾಳುಗಳು ಸಕಲೇಶಪುರ ಕ್ರಾಫರ್ಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಬಗ್ಗೆ ಸಕಲೇಶಪುರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!