- Advertisement -
- Advertisement -
ಸಕಲೇಶಪುರ (ಅ.20): ಹರಿಯಾಣ ರಾಜ್ಯದ ನೋಂದಣಿಯ ಲಾರಿಯೊಂದರಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 30 ಕೋಣಗಳನ್ನು ಭಜರಂಗದಳದ ಕಾರ್ಯಕರ್ತರು ಪೊಲೀಸರಿಗೆ ಒಪ್ಪಿಸಿರುವ ಘಟನೆ ತಾಲೂಕಿನ ಮಾರನಹಳ್ಳಿ ಸಮೀಪ ನಡೆದಿದೆ.
ಆರೋಪಿಗಳನ್ನು ಹರಿಯಾಣದ ಕೈತಾಲ್ ಜಿಲ್ಲೆಯ ರಾಜವುಂಡ್ ಗ್ರಾಮದ ವಿಕಾಸ್ (25) ಹಾಗೂ ಅನಿಲ್ ಕುಮಾರ (30) ಹರಿಯಾಣದ ಚೋಚರಾನ್ ಗ್ರಾಮದವನು ಎಂದು ತಿಳಿದುಬಂದಿದೆ.ಲಾರಿಯಲ್ಲಿ ಯಾವುದೇ ರೀತಿಯ ಅನುಮಾನ ಬರದಂತೆ ಸಂಪೂರ್ಣವಾಗಿ ಟಾರ್ಪಲ್ ಹಾಕಿ ಕೋಣಗಳನ್ನು ಸಾಗಾಟ ಮಾಡಲಾಗುತ್ತಿತ್ತು.
ಗ್ರಾಮಾಂತರ ಠಾಣೆ ಪಿಎಸ್ಐ ಚಂದ್ರಶೇಖರ್ ನೇತೃತ್ವದ ತಂಡ ತಕ್ಷಣ ಲಾರಿಯನ್ನು ಪರಿಶೀಲಿಸಿ ಇಬ್ಬರು ಚಾಲಕರನ್ನು ಬಂಧಿಸಿದ್ದು, ಯಾವುದೇ ಪರವಾನಗಿ ಪಡೆಯದೆ ಉತ್ತರ ಪ್ರದೇಶ ರಾಜ್ಯದಿಂದ ಕೋಣಗಳನ್ನು ತುಂಬಿಸಿ ಕೇರಳ ರಾಜ್ಯದ ಪಾಲಕ್ಕಾಡ್ಗೆ ಕಳುಹಿಸುತ್ತಿದ್ದರು ಎಂದು ತಿಳಿದುಬಂದಿದೆ. ವೃತ್ತ ನಿರೀಕ್ಷಕ ಗಿರೀಶ್.ಬಿ ನೇತೃತ್ವದಲ್ಲಿ ತನಿಖೆ ನಡೆಸಲಾಗಿದ್ದು, ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಾಗಿದೆ.
- Advertisement -