Sunday, May 5, 2024
spot_imgspot_img
spot_imgspot_img

ಉಪ್ಪಿನಂಗಡಿ: ಬೈಕ್ ಸ್ಕಿಡ್; ಹಿಂಬದಿ ಸವಾರ ಸಾವು..!

- Advertisement -G L Acharya panikkar
- Advertisement -

ಉಪ್ಪಿನಂಗಡಿ: ಬೈಕ್ ಸ್ಕಿಡ್ ಆಗಿ ಮಗುಚಿ ಬಿದ್ದ ಪರಿಣಾಮ ಬೈಕ್‌ನ ಹಿಂಬದಿ ಸವಾರ ಮೃತಪಟ್ಟ ಘಟನೆ ಕರಾಯ ಗ್ರಾಮದ ಮರಿಪ್ಪಾದೆ ಎಂಬಲ್ಲಿ ನಡೆದಿದೆ.

ಮೃಪಟ್ಟ ವ್ಯಕ್ತಿ ಬೆಳ್ತಂಗಡಿ ತಾಲೂಕಿನ ಕರಾಯ ಗ್ರಾಮದ ಕಲೋಲಿ ನಿವಾಸಿ ನಾರಾಯಣ ನಾಯ್ಕ (79) ಎಂದು ಗುರುತಿಸಲಾಗಿದೆ.

ಇವರು ತನ್ನ ಪುತ್ರ ಉದಯ ಎಂಬವರು ಚಲಾಯಿಸುತ್ತಿದ್ದ ಬೈಕ್‌ನಲ್ಲಿ ಹಿಂಬದಿ ಸವಾರನಾಗಿ ಕಲ್ಲೇರಿಯಲ್ಲಿ ನಡೆದ ಕಾರ್ಯಕ್ರಮವೊಂದಕ್ಕೆ ತೆರಳಿದ್ದು, ಅಲ್ಲಿಂದ ವಾಪಸು ಹಿಂದಿರುಗುತ್ತಿದ್ದಾಗ ಈ ದುರ್ಘಟನೆ ನಡೆದಿದೆ. ಘಟನೆಯಿಂದ ಬೈಕ್ ಸವಾರ ಉದಯ ಅವರಿಗೂ ಗಂಭೀರ ಗಾಯವಾಗಿದ್ದು, ಮಂಗಳೂರಿನ ಜಿಲ್ಲಾ ಸರಕಾರಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಈ ಬಗ್ಗೆ ಪುತ್ತೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತರು ಪತ್ನಿ, ಮೂವರು ಪುತ್ರರು ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

- Advertisement -

Related news

error: Content is protected !!